ಹೊಸಕೋಟೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬಸ್ಸುಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಕುಪ್ಪಂ ಗ್ಯಾಂಗ್ ನ್ನು ಅರೆಸ್ಟ್ ಮಾಡಲಾಗಿದೆ.
ಬಂಧಿತರಿಂದ ಸುಮಾರು 12 ಲಕ್ಷ ಮೌಲ್ಯದ ಚಿನ್ನಾಭರಣ, 3.50 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ..
ಈ ಖತರ್ನಾಕ್ ಕುಪ್ಪಂ ಗ್ಯಾಂಗ್ ಕಳ್ಳತನಕ್ಕೆ ಮಕ್ಕಳನ್ನ ಬಳಕೆ ಮಾಡುತ್ತಿದ್ದರು. ಬಸ್ಸಿನಲ್ಲಿ ಪ್ರಯಾಣ ಮಾಡುವ ವೇಳೆ ಮಕ್ಕಳಿಗೆ ವಾಂತಿ ಬರುವ ನಾಟಕ ಮಾಡಿ, ಪ್ರಯಾಣಿಕ ಗಮನ ಬೇರೆಡೆ ಸೆಳೆದು ಆಭರಣಗಳನ್ನ ಕದಿಯುತ್ತಿದ್ದರು.
ಇದೇ ರೀತಿ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದ ವೃದ್ಧೆಯ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಲಾಗಿತ್ತು. ವೃದ್ದೆ ಧರಿಸಿದ್ಧ 74ಗ್ರಾಂ ಚಿನ್ನದ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿದ್ದರು. ಈ ಕುರಿತು ದೂರು ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸದ್ಯ ಬಂಧನ ಮಾಡಲಾಗಿದೆ.
ಸದ್ಯ ಎ1 ದಿವಾಕರ್ ಬಂಧಿಸಿದ್ದು, ಉಳಿದ ಎ2 ಮೋನಿಷಾ, ಎ3 ಗಾಯಿತ್ರಿ, ಎ4 ಇಂದ್ರಾ ಆರೋಪಿಗಳಿಗೆ ಶೋಧ ಕಾರ್ಯ ನಡೆಯುತ್ತಿದೆ.
ಪ್ರಕರಣ ಭೇದಿಸಿರುವ ಡಿವೈಎಸ್ಪಿ ಮಲ್ಲೇಶ್, ಇನ್ಸ್ಪೆಕ್ಟರ್ ಗೋವಿಂದ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಚಂದ್ರಕಾಂತ್ ಅವರಿಂದ ಪ್ರಶಂಸೆ ವ್ಯಕ್ತವಾಗಿದೆ..
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…