ಹೊಸಕೋಟೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬಸ್ಸುಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಕುಪ್ಪಂ ಗ್ಯಾಂಗ್ ನ್ನು ಅರೆಸ್ಟ್ ಮಾಡಲಾಗಿದೆ.
ಬಂಧಿತರಿಂದ ಸುಮಾರು 12 ಲಕ್ಷ ಮೌಲ್ಯದ ಚಿನ್ನಾಭರಣ, 3.50 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ..
ಈ ಖತರ್ನಾಕ್ ಕುಪ್ಪಂ ಗ್ಯಾಂಗ್ ಕಳ್ಳತನಕ್ಕೆ ಮಕ್ಕಳನ್ನ ಬಳಕೆ ಮಾಡುತ್ತಿದ್ದರು. ಬಸ್ಸಿನಲ್ಲಿ ಪ್ರಯಾಣ ಮಾಡುವ ವೇಳೆ ಮಕ್ಕಳಿಗೆ ವಾಂತಿ ಬರುವ ನಾಟಕ ಮಾಡಿ, ಪ್ರಯಾಣಿಕ ಗಮನ ಬೇರೆಡೆ ಸೆಳೆದು ಆಭರಣಗಳನ್ನ ಕದಿಯುತ್ತಿದ್ದರು.
ಇದೇ ರೀತಿ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದ ವೃದ್ಧೆಯ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಲಾಗಿತ್ತು. ವೃದ್ದೆ ಧರಿಸಿದ್ಧ 74ಗ್ರಾಂ ಚಿನ್ನದ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿದ್ದರು. ಈ ಕುರಿತು ದೂರು ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸದ್ಯ ಬಂಧನ ಮಾಡಲಾಗಿದೆ.
ಸದ್ಯ ಎ1 ದಿವಾಕರ್ ಬಂಧಿಸಿದ್ದು, ಉಳಿದ ಎ2 ಮೋನಿಷಾ, ಎ3 ಗಾಯಿತ್ರಿ, ಎ4 ಇಂದ್ರಾ ಆರೋಪಿಗಳಿಗೆ ಶೋಧ ಕಾರ್ಯ ನಡೆಯುತ್ತಿದೆ.
ಪ್ರಕರಣ ಭೇದಿಸಿರುವ ಡಿವೈಎಸ್ಪಿ ಮಲ್ಲೇಶ್, ಇನ್ಸ್ಪೆಕ್ಟರ್ ಗೋವಿಂದ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಚಂದ್ರಕಾಂತ್ ಅವರಿಂದ ಪ್ರಶಂಸೆ ವ್ಯಕ್ತವಾಗಿದೆ..
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…