ಹೊಸಕೋಟೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬಸ್ಸುಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಕುಪ್ಪಂ ಗ್ಯಾಂಗ್ ನ್ನು ಅರೆಸ್ಟ್ ಮಾಡಲಾಗಿದೆ.
ಬಂಧಿತರಿಂದ ಸುಮಾರು 12 ಲಕ್ಷ ಮೌಲ್ಯದ ಚಿನ್ನಾಭರಣ, 3.50 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ..
ಈ ಖತರ್ನಾಕ್ ಕುಪ್ಪಂ ಗ್ಯಾಂಗ್ ಕಳ್ಳತನಕ್ಕೆ ಮಕ್ಕಳನ್ನ ಬಳಕೆ ಮಾಡುತ್ತಿದ್ದರು. ಬಸ್ಸಿನಲ್ಲಿ ಪ್ರಯಾಣ ಮಾಡುವ ವೇಳೆ ಮಕ್ಕಳಿಗೆ ವಾಂತಿ ಬರುವ ನಾಟಕ ಮಾಡಿ, ಪ್ರಯಾಣಿಕ ಗಮನ ಬೇರೆಡೆ ಸೆಳೆದು ಆಭರಣಗಳನ್ನ ಕದಿಯುತ್ತಿದ್ದರು.
ಇದೇ ರೀತಿ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದ ವೃದ್ಧೆಯ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಲಾಗಿತ್ತು. ವೃದ್ದೆ ಧರಿಸಿದ್ಧ 74ಗ್ರಾಂ ಚಿನ್ನದ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿದ್ದರು. ಈ ಕುರಿತು ದೂರು ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸದ್ಯ ಬಂಧನ ಮಾಡಲಾಗಿದೆ.
ಸದ್ಯ ಎ1 ದಿವಾಕರ್ ಬಂಧಿಸಿದ್ದು, ಉಳಿದ ಎ2 ಮೋನಿಷಾ, ಎ3 ಗಾಯಿತ್ರಿ, ಎ4 ಇಂದ್ರಾ ಆರೋಪಿಗಳಿಗೆ ಶೋಧ ಕಾರ್ಯ ನಡೆಯುತ್ತಿದೆ.
ಪ್ರಕರಣ ಭೇದಿಸಿರುವ ಡಿವೈಎಸ್ಪಿ ಮಲ್ಲೇಶ್, ಇನ್ಸ್ಪೆಕ್ಟರ್ ಗೋವಿಂದ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಚಂದ್ರಕಾಂತ್ ಅವರಿಂದ ಪ್ರಶಂಸೆ ವ್ಯಕ್ತವಾಗಿದೆ..
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…
ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…