ನೂತನ ಮನೆಯ ಗೃಹಪ್ರವೇಶಕ್ಕೆ ಅಡುಗೆ ಕೆಲಸಕ್ಕೆ ಬಂದಿದ್ದ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ಜಾಲಪ್ಪ ಕಾಲೇಜು ರಸ್ತೆಯ ಅಶ್ವತ್ಥಪ್ಪನವರ ಮನೆ ಬಳಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇ ಕಾಲುವೆ ನಿವಾಸಿ ಹೇಮಂತ (17), ಮೃತ ಬಾಲಕ.
ಶಾಮಿಯಾನ ಬಿಚ್ಚಲು ಹೋಗಿ ವಿದ್ಯುತ್ ಶಾಕ್ ಹೊಡೆದು ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಶಂಕೆ ವ್ಯಕ್ತಪಡಿಸಿದ್ದಾರೆ.
ವಿದ್ಯುತ್ ಸ್ಪರ್ಶಿಸಿದ ಕೂಡಲೇ ಮೇಲಿನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನಪ್ಪಿರುವುದಾಗಿ ಪೋಷಕರು ಆರೋಪ ಮಾಡಿದ್ದಾರೆ.
ಬಾಲಕಾರ್ಮಿಕನನ್ನು ಕೆಲಸಕ್ಕೆ ಕರೆದುಕೊಂಡು ಕೆಲಸ ಮಾಡಿಸಿರುವ ಗುತ್ತಿಗೆದಾರನ ವಿರುದ್ಧ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಠಾಣೆಯಲ್ಲಿ ಕೇವಲ ಯು.ಡಿ.ಆರ್.ದಾಖಲಿಸಿ ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿಲ್ಲ ಎಂದು ಆರೋಪ ಮಾಡಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಮತ್ತೆ ಪೋಷಕರು ದೂರು ನೀಡಿದ್ದಾರೆ. ಶವ ಪರೀಕ್ಷೆ ವರದಿ ಬಂದ ನಂತರ ಪರಿಶೀಲಿಸುವುದಾಗಿ ಗ್ರಾಮಾಂತರ ಠಾಣೆ ಪೊಲೀಸರು ಹೇಳಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…