ಬೆಂಗಳೂರು: ರಾಜಧಾನಿಯ ಅಬ್ಬಿಗೆರೆಯಲ್ಲಿ ಸಣ್ಣಪುಟ್ಟ ಕೌಟುಂಬಿಕ ಕಲಹವೊಂದು ದೊಡ್ಡ ದುರಂತಕ್ಕೆ ಕಾರಣವಾಗಿದೆ. ಅಡುಗೆ ಮಾಡುವ ವಿಚಾರಕ್ಕೆ ಅತ್ತೆಯೊಂದಿಗೆ ಉಂಟಾದ ಮನಸ್ತಾಪದಿಂದ ಬೇಸತ್ತ ಸಾಫ್ಟ್ವೇರ್ ಎಂಜಿನಿಯರ್ ಸುಷ್ಮಾ (35) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆಯ ಹಿನ್ನೆಲೆ:
ಮೃತ ಸುಷ್ಮಾ ಖ್ಯಾತ ಡೆಲ್ (Dell) ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. 5 ವರ್ಷಗಳ ಹಿಂದೆ ಇವರ ವಿವಾಹ ಪುನೀತ್ ಕುಮಾರ್ ಎಂಬುವವರೊಂದಿಗೆ ನಡೆದಿತ್ತು. ಈ ದಂಪತಿಗೆ 4 ವರ್ಷದ ಮುದ್ದಾದ ಗಂಡು ಮಗುವಿದೆ. ಆದರೆ, ಕಳೆದ ಕೆಲವು ಸಮಯದಿಂದ ಮನೆಯಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಗಳು ನಡೆಯುತ್ತಿದ್ದವು ಎನ್ನಲಾಗಿದೆ. ಇತ್ತೀಚೆಗೆ ಒಂದೇ ಒಲೆಯ ಮೇಲೆ ಪ್ರತ್ಯೇಕವಾಗಿ ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಕಲ್ಪನಾ ಹಾಗೂ ಸೊಸೆ ಸುಷ್ಮಾ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಅತ್ತೆ ಕಲ್ಪನಾ ಅವರು ಅಡುಗೆ ಮಾಡುವ ವೇಳೆ ಸೊಸೆಗೆ ಜಾಗ ಬಿಟ್ಟು ಕೊಡುತ್ತಿರಲಿಲ್ಲ ಎನ್ನಲಾಗಿದ್ದು, ಈ ವಿಚಾರದಿಂದ ಸುಷ್ಮಾ ತೀವ್ರ ಮನನೊಂದಿದ್ದರು.
ಅತ್ತೆಯ ವರ್ತನೆಯಿಂದ ಜಿಗುಪ್ಸೆಗೊಂಡ ಸುಷ್ಮಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ಸುಷ್ಮಾ ಅವರ ಮನೆಯವರು ಮಗಳ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುಷ್ಮಾ ಸಾವಿನ ಬಳಿಕ ಅವರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪತಿ ಬಂಧನ; ಅತ್ತೆಗಾಗಿ ಹುಡುಕಾಟ
ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಷ್ಮಾ ಮನೆಯವರು ನೀಡಿದ ದೂರಿನ ಅನ್ವಯ ಪೊಲೀಸರು ಈಗಾಗಲೇ ಪತಿ ಪುನೀತ್ ಕುಮಾರ್ನನ್ನು ಬಂಧಿಸಿದ್ದಾರೆ. ಇನ್ನು ತಲೆಮರೆಸಿಕೊಂಡಿರುವ ಅತ್ತೆ ಕಲ್ಪನಾ ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ದಶಕಗಳ ಕಾಲ ಓದಿ, ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ಅಡುಗೆ ಮಾಡುವಂತಹ ಕ್ಷುಲ್ಲಕ ವಿಚಾರಕ್ಕೆ ಜೀವ ಕಳೆದುಕೊಂಡಿರುವುದು ತೀವ್ರ ವಿಷಾದದ ಸಂಗತಿಯಾಗಿದೆ.
ಪಾದಚಾರಿಗೆ ಬೈಕ್ ಡಿಕ್ಕಿಯಾಗಿರುವ ಘಟನೆ ಇಂದು ದೊಡ್ಡಬಳ್ಳಾಪುರದ ಶ್ಯಾಕಲದೇವನಪುರ ಬಳಿ ನಡೆದಿದೆ. ಪಾದಚಾರಿಗೆ ಬೈಕ್ ಡಿಕ್ಕಿ ರಭಸಕ್ಕೆ ಪಾದಚಾರಿಗೆ ಸಣ್ಣಪುಟ್ಟ…
ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಾದರಿ ಕ್ಷೇತ್ರವಾಗಿ ಹೊರಹೊಮ್ಮಲಿದೆ ಎಂದು…
“ಜನತೆಗೆ ಗೌರವಯುತವಾಗಿ ಜೀವನ ನಡೆಸಲು ಮೂಲಸೌಕರ್ಯ ಕಲ್ಪಿಸುವುದೇ ಜನಪ್ರತಿನಿಧಿಗಳ ಕರ್ತವ್ಯ” ಎಂದು ಸಚಿವ ಕೆ.ಜೆ.ಜಾರ್ಜ್ ಅನಿಸಿಕೆ ವ್ಯಕ್ತಪಡಿಸಿದರು. ಇಂಧನ ಸಚಿವರು…
ಪ್ರಸ್ತುತ ರಾಜ್ಯದಲ್ಲಿ 2 ಲಕ್ಷ 6 ಸಾವಿರ ಪೋಡಿ ಪ್ರಕರಣಗಳ ದುರಸ್ತಿ ಮಾಡಲಾಗಿದ್ದು ಮುಂದಿನ ಎರಡು ವರ್ಷಗಳಲ್ಲಿ 5 ಲಕ್ಷ…
ದೇಶದ ಶ್ರೀಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು, ಔಷಧ, ಶಸ್ತ್ರಚಿಕಿತ್ಸಾ ಉಪಕರಣಗಳು ಲಭ್ಯವಾಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ…
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2025-26ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ…