ಬೆಂಗಳೂರು: ರಾಜಧಾನಿಯ ಅಬ್ಬಿಗೆರೆಯಲ್ಲಿ ಸಣ್ಣಪುಟ್ಟ ಕೌಟುಂಬಿಕ ಕಲಹವೊಂದು ದೊಡ್ಡ ದುರಂತಕ್ಕೆ ಕಾರಣವಾಗಿದೆ. ಅಡುಗೆ ಮಾಡುವ ವಿಚಾರಕ್ಕೆ ಅತ್ತೆಯೊಂದಿಗೆ ಉಂಟಾದ ಮನಸ್ತಾಪದಿಂದ ಬೇಸತ್ತ ಸಾಫ್ಟ್ವೇರ್ ಎಂಜಿನಿಯರ್ ಸುಷ್ಮಾ (35) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆಯ ಹಿನ್ನೆಲೆ:
ಮೃತ ಸುಷ್ಮಾ ಖ್ಯಾತ ಡೆಲ್ (Dell) ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. 5 ವರ್ಷಗಳ ಹಿಂದೆ ಇವರ ವಿವಾಹ ಪುನೀತ್ ಕುಮಾರ್ ಎಂಬುವವರೊಂದಿಗೆ ನಡೆದಿತ್ತು. ಈ ದಂಪತಿಗೆ 4 ವರ್ಷದ ಮುದ್ದಾದ ಗಂಡು ಮಗುವಿದೆ. ಆದರೆ, ಕಳೆದ ಕೆಲವು ಸಮಯದಿಂದ ಮನೆಯಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಗಳು ನಡೆಯುತ್ತಿದ್ದವು ಎನ್ನಲಾಗಿದೆ. ಇತ್ತೀಚೆಗೆ ಒಂದೇ ಒಲೆಯ ಮೇಲೆ ಪ್ರತ್ಯೇಕವಾಗಿ ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಕಲ್ಪನಾ ಹಾಗೂ ಸೊಸೆ ಸುಷ್ಮಾ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಅತ್ತೆ ಕಲ್ಪನಾ ಅವರು ಅಡುಗೆ ಮಾಡುವ ವೇಳೆ ಸೊಸೆಗೆ ಜಾಗ ಬಿಟ್ಟು ಕೊಡುತ್ತಿರಲಿಲ್ಲ ಎನ್ನಲಾಗಿದ್ದು, ಈ ವಿಚಾರದಿಂದ ಸುಷ್ಮಾ ತೀವ್ರ ಮನನೊಂದಿದ್ದರು.
ಅತ್ತೆಯ ವರ್ತನೆಯಿಂದ ಜಿಗುಪ್ಸೆಗೊಂಡ ಸುಷ್ಮಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ಸುಷ್ಮಾ ಅವರ ಮನೆಯವರು ಮಗಳ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುಷ್ಮಾ ಸಾವಿನ ಬಳಿಕ ಅವರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪತಿ ಬಂಧನ; ಅತ್ತೆಗಾಗಿ ಹುಡುಕಾಟ
ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಷ್ಮಾ ಮನೆಯವರು ನೀಡಿದ ದೂರಿನ ಅನ್ವಯ ಪೊಲೀಸರು ಈಗಾಗಲೇ ಪತಿ ಪುನೀತ್ ಕುಮಾರ್ನನ್ನು ಬಂಧಿಸಿದ್ದಾರೆ. ಇನ್ನು ತಲೆಮರೆಸಿಕೊಂಡಿರುವ ಅತ್ತೆ ಕಲ್ಪನಾ ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ದಶಕಗಳ ಕಾಲ ಓದಿ, ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ಅಡುಗೆ ಮಾಡುವಂತಹ ಕ್ಷುಲ್ಲಕ ವಿಚಾರಕ್ಕೆ ಜೀವ ಕಳೆದುಕೊಂಡಿರುವುದು ತೀವ್ರ ವಿಷಾದದ ಸಂಗತಿಯಾಗಿದೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…