Categories: Crime

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಜಗಳ; ಮನನೊಂದು ಡೆಲ್ ಕಂಪನಿ ಟೆಕ್ಕಿ ಆತ್ಮಹತ್ಯೆ!

ಬೆಂಗಳೂರು: ರಾಜಧಾನಿಯ ಅಬ್ಬಿಗೆರೆಯಲ್ಲಿ ಸಣ್ಣಪುಟ್ಟ ಕೌಟುಂಬಿಕ ಕಲಹವೊಂದು ದೊಡ್ಡ ದುರಂತಕ್ಕೆ ಕಾರಣವಾಗಿದೆ. ಅಡುಗೆ ಮಾಡುವ ವಿಚಾರಕ್ಕೆ ಅತ್ತೆಯೊಂದಿಗೆ ಉಂಟಾದ ಮನಸ್ತಾಪದಿಂದ ಬೇಸತ್ತ ಸಾಫ್ಟ್‌ವೇರ್ ಎಂಜಿನಿಯರ್ ಸುಷ್ಮಾ (35) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನೆಯ ಹಿನ್ನೆಲೆ:

ಮೃತ ಸುಷ್ಮಾ ಖ್ಯಾತ ಡೆಲ್ (Dell) ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. 5 ವರ್ಷಗಳ ಹಿಂದೆ ಇವರ ವಿವಾಹ ಪುನೀತ್ ಕುಮಾರ್ ಎಂಬುವವರೊಂದಿಗೆ ನಡೆದಿತ್ತು. ಈ ದಂಪತಿಗೆ 4 ವರ್ಷದ ಮುದ್ದಾದ ಗಂಡು ಮಗುವಿದೆ. ಆದರೆ, ಕಳೆದ ಕೆಲವು ಸಮಯದಿಂದ ಮನೆಯಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಗಳು ನಡೆಯುತ್ತಿದ್ದವು ಎನ್ನಲಾಗಿದೆ. ಇತ್ತೀಚೆಗೆ ಒಂದೇ ಒಲೆಯ ಮೇಲೆ ಪ್ರತ್ಯೇಕವಾಗಿ ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಕಲ್ಪನಾ ಹಾಗೂ ಸೊಸೆ ಸುಷ್ಮಾ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಅತ್ತೆ ಕಲ್ಪನಾ ಅವರು ಅಡುಗೆ ಮಾಡುವ ವೇಳೆ ಸೊಸೆಗೆ ಜಾಗ ಬಿಟ್ಟು ಕೊಡುತ್ತಿರಲಿಲ್ಲ ಎನ್ನಲಾಗಿದ್ದು, ಈ ವಿಚಾರದಿಂದ ಸುಷ್ಮಾ ತೀವ್ರ ಮನನೊಂದಿದ್ದರು.

ಅತ್ತೆಯ ವರ್ತನೆಯಿಂದ ಜಿಗುಪ್ಸೆಗೊಂಡ ಸುಷ್ಮಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ಸುಷ್ಮಾ ಅವರ ಮನೆಯವರು ಮಗಳ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುಷ್ಮಾ ಸಾವಿನ ಬಳಿಕ ಅವರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಪತಿ ಬಂಧನ; ಅತ್ತೆಗಾಗಿ ಹುಡುಕಾಟ

ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಷ್ಮಾ ಮನೆಯವರು ನೀಡಿದ ದೂರಿನ ಅನ್ವಯ ಪೊಲೀಸರು ಈಗಾಗಲೇ ಪತಿ ಪುನೀತ್ ಕುಮಾರ್‌ನನ್ನು ಬಂಧಿಸಿದ್ದಾರೆ. ಇನ್ನು ತಲೆಮರೆಸಿಕೊಂಡಿರುವ ಅತ್ತೆ ಕಲ್ಪನಾ ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ದಶಕಗಳ ಕಾಲ ಓದಿ, ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ಅಡುಗೆ ಮಾಡುವಂತಹ ಕ್ಷುಲ್ಲಕ ವಿಚಾರಕ್ಕೆ ಜೀವ ಕಳೆದುಕೊಂಡಿರುವುದು ತೀವ್ರ ವಿಷಾದದ ಸಂಗತಿಯಾಗಿದೆ.

Ramesh Babu

Journalist

Recent Posts

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

5 minutes ago

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ- ಸಚಿವ ಎನ್ ಚಲುವರಾಯಸ್ವಾಮಿ

ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ…

4 hours ago

ಇಂದು (ಸೆ.8) ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ…

4 hours ago

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

16 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

19 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

1 day ago