ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ.
ಘಟನೆಯಲ್ಲಿ 9 ವರ್ಷದ ಮಹಮ್ಮದ್ ಇಶಾಕ್, 7 ವರ್ಷದ ಮಹಮ್ಮದ್ ಜುನೇದ್ ಸ್ಥಳದಲ್ಲೇ ಮೃತಪಟ್ಟಿದ್ದರೆ, 5 ವರ್ಷದ ರೋಹನ್ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.
35 ವರ್ಷದ ಖಾಸೀಂ ಮೂರು ಮಕ್ಕಳ ಗುಪ್ತಾಂಗಗಳಿಗೆ ಕಬ್ಬಿಣದ ರಾಡ್ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ.
ಗಾರೆ ಕೆಲಸ ಮಾಡುವ ಚಾಂದ್ ಪಾಷಾ ಕಮ್ಮಸಂದ್ರದ ಮನೆಯಲ್ಲಿ ಪತ್ನಿ, ಮೂವರು ಮಕ್ಕಳು, ತಾಯಿ ಮತ್ತು ತಮ್ಮನ ಜೊತೆ ವಾಸವಿದ್ದರು. ಪತ್ನಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಾರೆ. ದಂಪತಿ ಕೆಲಸಕ್ಕೆ ಮತ್ತು ಪಾಷಾ ತಾಯಿ ಮಾರುಕಟ್ಟೆಗೆ ಹೋಗಿದ್ದರು. ಈ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮಕ್ಕಳ ಬಾಯಿಗೆ ಬಟ್ಟೆ ತುರುಕಿದ ಖಾಸಿಂ ಕಬ್ಬಿಣದ ರಾಡ್ ಮತ್ತು ಸುತ್ತಿಗೆಯಿಂದ ಮಕ್ಕಳ ಖಾಸಗಿ ಭಾಗ ಹಾಗೂ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.
ಮಕ್ಕಳ ಕೂಗಾಟ ಕೇಳಿಸದಂತೆ ಮೂವರ ಬಾಯಿಗೆ ಬಟ್ಟೆ ತುರುಕಿದ್ದರೂ ಮಕ್ಕಳು ಕೂಗು, ಗಲಾಟೆ ಅಕ್ಕಪಕ್ಕದ ಮನೆಯವರಿಗೆ ಕೇಳಿಸಿದೆ. ಅನುಮಾನಗೊಂಡ ಅವರು ಬಾಗಿಲು ತಟ್ಟಿದಾಗ ಖಾಸಿಂ ತೆಗೆಯಲಿಲ್ಲ. ಆಗ ಬಾಗಿಲು ಒಡೆದು ಒಳ ನುಗ್ಗಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಕ್ಕಳಲ್ಲಿ ಇಬ್ಬರು ಮೃತಪಟ್ಟಿದ್ದರು.
ಮತ್ತೊಬ್ಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ತಕ್ಷಣವೇ ಆತನನ್ನು ಸ್ಥಳೀಯರು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದರು.
ಮಾನಸಿಕ ಅಸ್ವಸ್ಥನಾಗಿದ್ದ ಖಾಸಿಂ ಕಳೆದ ತಿಂಗಳು ಮನೆಯಿಂದ ಏಕಾಏಕಿ ಕಾಣೆಯಾಗಿದ್ದ. ತಮ್ಮನನ್ನು ಅಣ್ಣ ಚಾಂದ್ ಪಾಷಾ ಹುಡುಕಿ ಕರೆ ತಂದು ಮನೆಯಲ್ಲಿಯೇ ಇಟ್ಟುಕೊಂಡಿದ್ದ.
ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ಎಂ.ನಾರಾಯಣ್, ಎಸಿಪಿ ಸತೀಶ್, ಇನ್ಸ್ಪೆಕ್ಟರ್ ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…