Categories: Crime

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ.

ಘಟನೆಯಲ್ಲಿ 9 ವರ್ಷದ ಮಹಮ್ಮದ್ ಇಶಾಕ್, 7 ವರ್ಷದ ಮಹಮ್ಮದ್ ಜುನೇದ್ ಸ್ಥಳದಲ್ಲೇ ಮೃತಪಟ್ಟಿದ್ದರೆ, 5 ವರ್ಷದ ರೋಹನ್ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

35 ವರ್ಷದ ಖಾಸೀಂ ಮೂರು ಮಕ್ಕಳ ಗುಪ್ತಾಂಗಗಳಿಗೆ ಕಬ್ಬಿಣದ ರಾಡ್‌ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ.

ಗಾರೆ ಕೆಲಸ ಮಾಡುವ ಚಾಂದ್‌ ಪಾಷಾ ಕಮ್ಮಸಂದ್ರದ ಮನೆಯಲ್ಲಿ ಪತ್ನಿ, ಮೂವರು ಮಕ್ಕಳು, ತಾಯಿ ಮತ್ತು ತಮ್ಮನ ಜೊತೆ ವಾಸವಿದ್ದರು. ಪತ್ನಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಾರೆ. ದಂಪತಿ ಕೆಲಸಕ್ಕೆ ಮತ್ತು ಪಾಷಾ ತಾಯಿ ಮಾರುಕಟ್ಟೆಗೆ ಹೋಗಿದ್ದರು. ಈ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮಕ್ಕಳ ಬಾಯಿಗೆ ಬಟ್ಟೆ ತುರುಕಿದ ಖಾಸಿಂ ಕಬ್ಬಿಣದ ರಾಡ್‌ ಮತ್ತು ಸುತ್ತಿಗೆಯಿಂದ ಮಕ್ಕಳ  ಖಾಸಗಿ ಭಾಗ ಹಾಗೂ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.

ಮಕ್ಕಳ ಕೂಗಾಟ ಕೇಳಿಸದಂತೆ ಮೂವರ ಬಾಯಿಗೆ ಬಟ್ಟೆ ತುರುಕಿದ್ದರೂ ಮಕ್ಕಳು ಕೂಗು, ಗಲಾಟೆ ಅಕ್ಕಪಕ್ಕದ ಮನೆಯವರಿಗೆ ಕೇಳಿಸಿದೆ. ಅನುಮಾನಗೊಂಡ ಅವರು ಬಾಗಿಲು ತಟ್ಟಿದಾಗ ಖಾಸಿಂ ತೆಗೆಯಲಿಲ್ಲ. ಆಗ ಬಾಗಿಲು ಒಡೆದು ಒಳ ನುಗ್ಗಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಕ್ಕಳಲ್ಲಿ ಇಬ್ಬರು ಮೃತಪಟ್ಟಿದ್ದರು.

ಮತ್ತೊಬ್ಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ತಕ್ಷಣವೇ ಆತನನ್ನು ಸ್ಥಳೀಯರು ನಿಮ್ಹಾನ್ಸ್‌ ಆಸ್ಪತ್ರೆಗೆ ದಾಖಲಿಸಿದರು.

ಮಾನಸಿಕ ಅಸ್ವಸ್ಥನಾಗಿದ್ದ ಖಾಸಿಂ ಕಳೆದ ತಿಂಗಳು ಮನೆಯಿಂದ ಏಕಾಏಕಿ ಕಾಣೆಯಾಗಿದ್ದ. ತಮ್ಮನನ್ನು ಅಣ್ಣ ಚಾಂದ್‌ ಪಾಷಾ ಹುಡುಕಿ ಕರೆ ತಂದು ಮನೆಯಲ್ಲಿಯೇ ಇಟ್ಟುಕೊಂಡಿದ್ದ.

ಜಂಟಿ ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌, ಡಿಸಿಪಿ ಎಂ.ನಾರಾಯಣ್‌, ಎಸಿಪಿ ಸತೀಶ್, ಇನ್‌ಸ್ಪೆಕ್ಟರ್‌ ಸೋಮಶೇಖರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

6 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

8 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago