Categories: Crime

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ.

ಘಟನೆಯಲ್ಲಿ 9 ವರ್ಷದ ಮಹಮ್ಮದ್ ಇಶಾಕ್, 7 ವರ್ಷದ ಮಹಮ್ಮದ್ ಜುನೇದ್ ಸ್ಥಳದಲ್ಲೇ ಮೃತಪಟ್ಟಿದ್ದರೆ, 5 ವರ್ಷದ ರೋಹನ್ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

35 ವರ್ಷದ ಖಾಸೀಂ ಮೂರು ಮಕ್ಕಳ ಗುಪ್ತಾಂಗಗಳಿಗೆ ಕಬ್ಬಿಣದ ರಾಡ್‌ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ.

ಗಾರೆ ಕೆಲಸ ಮಾಡುವ ಚಾಂದ್‌ ಪಾಷಾ ಕಮ್ಮಸಂದ್ರದ ಮನೆಯಲ್ಲಿ ಪತ್ನಿ, ಮೂವರು ಮಕ್ಕಳು, ತಾಯಿ ಮತ್ತು ತಮ್ಮನ ಜೊತೆ ವಾಸವಿದ್ದರು. ಪತ್ನಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಾರೆ. ದಂಪತಿ ಕೆಲಸಕ್ಕೆ ಮತ್ತು ಪಾಷಾ ತಾಯಿ ಮಾರುಕಟ್ಟೆಗೆ ಹೋಗಿದ್ದರು. ಈ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮಕ್ಕಳ ಬಾಯಿಗೆ ಬಟ್ಟೆ ತುರುಕಿದ ಖಾಸಿಂ ಕಬ್ಬಿಣದ ರಾಡ್‌ ಮತ್ತು ಸುತ್ತಿಗೆಯಿಂದ ಮಕ್ಕಳ  ಖಾಸಗಿ ಭಾಗ ಹಾಗೂ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.

ಮಕ್ಕಳ ಕೂಗಾಟ ಕೇಳಿಸದಂತೆ ಮೂವರ ಬಾಯಿಗೆ ಬಟ್ಟೆ ತುರುಕಿದ್ದರೂ ಮಕ್ಕಳು ಕೂಗು, ಗಲಾಟೆ ಅಕ್ಕಪಕ್ಕದ ಮನೆಯವರಿಗೆ ಕೇಳಿಸಿದೆ. ಅನುಮಾನಗೊಂಡ ಅವರು ಬಾಗಿಲು ತಟ್ಟಿದಾಗ ಖಾಸಿಂ ತೆಗೆಯಲಿಲ್ಲ. ಆಗ ಬಾಗಿಲು ಒಡೆದು ಒಳ ನುಗ್ಗಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಕ್ಕಳಲ್ಲಿ ಇಬ್ಬರು ಮೃತಪಟ್ಟಿದ್ದರು.

ಮತ್ತೊಬ್ಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ತಕ್ಷಣವೇ ಆತನನ್ನು ಸ್ಥಳೀಯರು ನಿಮ್ಹಾನ್ಸ್‌ ಆಸ್ಪತ್ರೆಗೆ ದಾಖಲಿಸಿದರು.

ಮಾನಸಿಕ ಅಸ್ವಸ್ಥನಾಗಿದ್ದ ಖಾಸಿಂ ಕಳೆದ ತಿಂಗಳು ಮನೆಯಿಂದ ಏಕಾಏಕಿ ಕಾಣೆಯಾಗಿದ್ದ. ತಮ್ಮನನ್ನು ಅಣ್ಣ ಚಾಂದ್‌ ಪಾಷಾ ಹುಡುಕಿ ಕರೆ ತಂದು ಮನೆಯಲ್ಲಿಯೇ ಇಟ್ಟುಕೊಂಡಿದ್ದ.

ಜಂಟಿ ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌, ಡಿಸಿಪಿ ಎಂ.ನಾರಾಯಣ್‌, ಎಸಿಪಿ ಸತೀಶ್, ಇನ್‌ಸ್ಪೆಕ್ಟರ್‌ ಸೋಮಶೇಖರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

9 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

9 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

14 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

20 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

21 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago