Categories: ಸಿನಿಮಾ

ಅಣ್ಣವ್ರು ಅಭಿನಯದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಗುನುಗಿದ ಮಲಯಾಳಂ ನಟ ಮೋಹನ್​ಲಾಲ್

ಡಾ.ರಾಜ್​ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್​ಲಾಲ್ ಅವರು ಮೊಬೈಲ್‌ನಲ್ಲಿ ಅಣ್ಣಾವ್ರ ಹಾಡು ನೋಡುತ್ತಾ ಗುನುಗಿರುವ ವೀಡಿಯೋ ವೈರಲ್ ಆಗುತ್ತಿದೆ. ನಟನ ಈ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಡಾ. ರಾಜ್‌ಕುಮಾರ್ ನಟನೆಯ ಸಿನಿಮಾಗಳು ಮಾತ್ರವಲ್ಲ, ಆ ಸಿನಿಮಾಗಳ ಎಲ್ಲಾ ಹಾಡುಗಳು ಸೂಪರ್ ಹಿಟ್‌ ಆಗಿವೆ.

50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರ್- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು. ರಾಜನ್‌-ನಾಗೇಂದ್ರ ಸಂಗೀತದಲ್ಲಿ ಒಟ್ಟು 6 ಹಾಡುಗಳು ಮೂಡಿ ಬಂದಿದ್ದವು. ಪಿ. ಬಿ ಶ್ರೀನಿವಾಸ್ ಹಾಗೂ ವಾಣಿ ಜಯರಾಂ ಈ ಹಾಡಿಗೆ ದನಿಯಾಗಿದ್ದರು.

30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಚಿತ್ರದ ಆಲ್ಬಮ್‌ ಕೂಡ ಸೂಪರ್ ಹಿಟ್ ಆಗಿತ್ತು. ಎಲ್ಲಾ ಹಾಡುಗಳಿಗೆ ಚಿ. ಉದಯಶಂಕರ್ ಸಾಹಿತ್ಯ ಬರೆದಿದ್ದರು.

ಇದೀಗ ಅಣ್ಣಾವ್ರ ಹಾಡನ್ನು ಮಲಯಾಳಂ ನಟ ಮೋಹನ್ ಲಾಲ್ ಹಾಡುತ್ತಿರುವುದು ನೆಟ್ಟಿಗರ ಗಮನ ಸೆಳೆದಿದೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ..

Ramesh Babu

Journalist

Share
Published by
Ramesh Babu

Recent Posts

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

11 minutes ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

4 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

5 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

5 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

9 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

20 hours ago