Categories: ಸಿನಿಮಾ

ಅಣ್ಣವ್ರು ಅಭಿನಯದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಗುನುಗಿದ ಮಲಯಾಳಂ ನಟ ಮೋಹನ್​ಲಾಲ್

ಡಾ.ರಾಜ್​ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್​ಲಾಲ್ ಅವರು ಮೊಬೈಲ್‌ನಲ್ಲಿ ಅಣ್ಣಾವ್ರ ಹಾಡು ನೋಡುತ್ತಾ ಗುನುಗಿರುವ ವೀಡಿಯೋ ವೈರಲ್ ಆಗುತ್ತಿದೆ. ನಟನ ಈ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಡಾ. ರಾಜ್‌ಕುಮಾರ್ ನಟನೆಯ ಸಿನಿಮಾಗಳು ಮಾತ್ರವಲ್ಲ, ಆ ಸಿನಿಮಾಗಳ ಎಲ್ಲಾ ಹಾಡುಗಳು ಸೂಪರ್ ಹಿಟ್‌ ಆಗಿವೆ.

50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರ್- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು. ರಾಜನ್‌-ನಾಗೇಂದ್ರ ಸಂಗೀತದಲ್ಲಿ ಒಟ್ಟು 6 ಹಾಡುಗಳು ಮೂಡಿ ಬಂದಿದ್ದವು. ಪಿ. ಬಿ ಶ್ರೀನಿವಾಸ್ ಹಾಗೂ ವಾಣಿ ಜಯರಾಂ ಈ ಹಾಡಿಗೆ ದನಿಯಾಗಿದ್ದರು.

30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಚಿತ್ರದ ಆಲ್ಬಮ್‌ ಕೂಡ ಸೂಪರ್ ಹಿಟ್ ಆಗಿತ್ತು. ಎಲ್ಲಾ ಹಾಡುಗಳಿಗೆ ಚಿ. ಉದಯಶಂಕರ್ ಸಾಹಿತ್ಯ ಬರೆದಿದ್ದರು.

ಇದೀಗ ಅಣ್ಣಾವ್ರ ಹಾಡನ್ನು ಮಲಯಾಳಂ ನಟ ಮೋಹನ್ ಲಾಲ್ ಹಾಡುತ್ತಿರುವುದು ನೆಟ್ಟಿಗರ ಗಮನ ಸೆಳೆದಿದೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ..

Ramesh Babu

Journalist

Share
Published by
Ramesh Babu

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

8 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

9 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

21 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

24 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 day ago