Categories: ಸಿನಿಮಾ

ಅಣ್ಣವ್ರು ಅಭಿನಯದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಗುನುಗಿದ ಮಲಯಾಳಂ ನಟ ಮೋಹನ್​ಲಾಲ್

ಡಾ.ರಾಜ್​ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್​ಲಾಲ್ ಅವರು ಮೊಬೈಲ್‌ನಲ್ಲಿ ಅಣ್ಣಾವ್ರ ಹಾಡು ನೋಡುತ್ತಾ ಗುನುಗಿರುವ ವೀಡಿಯೋ ವೈರಲ್ ಆಗುತ್ತಿದೆ. ನಟನ ಈ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಡಾ. ರಾಜ್‌ಕುಮಾರ್ ನಟನೆಯ ಸಿನಿಮಾಗಳು ಮಾತ್ರವಲ್ಲ, ಆ ಸಿನಿಮಾಗಳ ಎಲ್ಲಾ ಹಾಡುಗಳು ಸೂಪರ್ ಹಿಟ್‌ ಆಗಿವೆ.

50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರ್- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು. ರಾಜನ್‌-ನಾಗೇಂದ್ರ ಸಂಗೀತದಲ್ಲಿ ಒಟ್ಟು 6 ಹಾಡುಗಳು ಮೂಡಿ ಬಂದಿದ್ದವು. ಪಿ. ಬಿ ಶ್ರೀನಿವಾಸ್ ಹಾಗೂ ವಾಣಿ ಜಯರಾಂ ಈ ಹಾಡಿಗೆ ದನಿಯಾಗಿದ್ದರು.

30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಚಿತ್ರದ ಆಲ್ಬಮ್‌ ಕೂಡ ಸೂಪರ್ ಹಿಟ್ ಆಗಿತ್ತು. ಎಲ್ಲಾ ಹಾಡುಗಳಿಗೆ ಚಿ. ಉದಯಶಂಕರ್ ಸಾಹಿತ್ಯ ಬರೆದಿದ್ದರು.

ಇದೀಗ ಅಣ್ಣಾವ್ರ ಹಾಡನ್ನು ಮಲಯಾಳಂ ನಟ ಮೋಹನ್ ಲಾಲ್ ಹಾಡುತ್ತಿರುವುದು ನೆಟ್ಟಿಗರ ಗಮನ ಸೆಳೆದಿದೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ..

Ramesh Babu

Journalist

Share
Published by
Ramesh Babu

Recent Posts

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

37 seconds ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

2 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

3 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

4 hours ago

Ставки на спорт в Украине_ основы и стратегии(1)

Ставки на спорт UA: советы и стратегии для успеха Ставки на спорт в Украине: основы…

14 hours ago

ದೊಡ್ಡಬಳ್ಳಾಪುರ ನೂತನ ಉಪವಿಭಾಗಾಧಿಕಾರಿಯಾಗಿ ಮಂಜುನಾಥ್ ಟಿ.ಆರ್ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…

17 hours ago