Categories: ಸಿನಿಮಾ

ಅಣ್ಣವ್ರು ಅಭಿನಯದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಗುನುಗಿದ ಮಲಯಾಳಂ ನಟ ಮೋಹನ್​ಲಾಲ್

ಡಾ.ರಾಜ್​ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್​ಲಾಲ್ ಅವರು ಮೊಬೈಲ್‌ನಲ್ಲಿ ಅಣ್ಣಾವ್ರ ಹಾಡು ನೋಡುತ್ತಾ ಗುನುಗಿರುವ ವೀಡಿಯೋ ವೈರಲ್ ಆಗುತ್ತಿದೆ. ನಟನ ಈ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಡಾ. ರಾಜ್‌ಕುಮಾರ್ ನಟನೆಯ ಸಿನಿಮಾಗಳು ಮಾತ್ರವಲ್ಲ, ಆ ಸಿನಿಮಾಗಳ ಎಲ್ಲಾ ಹಾಡುಗಳು ಸೂಪರ್ ಹಿಟ್‌ ಆಗಿವೆ.

50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರ್- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು. ರಾಜನ್‌-ನಾಗೇಂದ್ರ ಸಂಗೀತದಲ್ಲಿ ಒಟ್ಟು 6 ಹಾಡುಗಳು ಮೂಡಿ ಬಂದಿದ್ದವು. ಪಿ. ಬಿ ಶ್ರೀನಿವಾಸ್ ಹಾಗೂ ವಾಣಿ ಜಯರಾಂ ಈ ಹಾಡಿಗೆ ದನಿಯಾಗಿದ್ದರು.

30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಚಿತ್ರದ ಆಲ್ಬಮ್‌ ಕೂಡ ಸೂಪರ್ ಹಿಟ್ ಆಗಿತ್ತು. ಎಲ್ಲಾ ಹಾಡುಗಳಿಗೆ ಚಿ. ಉದಯಶಂಕರ್ ಸಾಹಿತ್ಯ ಬರೆದಿದ್ದರು.

ಇದೀಗ ಅಣ್ಣಾವ್ರ ಹಾಡನ್ನು ಮಲಯಾಳಂ ನಟ ಮೋಹನ್ ಲಾಲ್ ಹಾಡುತ್ತಿರುವುದು ನೆಟ್ಟಿಗರ ಗಮನ ಸೆಳೆದಿದೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ..

Ramesh Babu

Journalist

Share
Published by
Ramesh Babu

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

7 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

18 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

19 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

19 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

22 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago