Categories: ಸಿನಿಮಾ

ಅಣ್ಣವ್ರು ಅಭಿನಯದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಗುನುಗಿದ ಮಲಯಾಳಂ ನಟ ಮೋಹನ್​ಲಾಲ್

ಡಾ.ರಾಜ್​ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್​ಲಾಲ್ ಅವರು ಮೊಬೈಲ್‌ನಲ್ಲಿ ಅಣ್ಣಾವ್ರ ಹಾಡು ನೋಡುತ್ತಾ ಗುನುಗಿರುವ ವೀಡಿಯೋ ವೈರಲ್ ಆಗುತ್ತಿದೆ. ನಟನ ಈ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಡಾ. ರಾಜ್‌ಕುಮಾರ್ ನಟನೆಯ ಸಿನಿಮಾಗಳು ಮಾತ್ರವಲ್ಲ, ಆ ಸಿನಿಮಾಗಳ ಎಲ್ಲಾ ಹಾಡುಗಳು ಸೂಪರ್ ಹಿಟ್‌ ಆಗಿವೆ.

50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರ್- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು. ರಾಜನ್‌-ನಾಗೇಂದ್ರ ಸಂಗೀತದಲ್ಲಿ ಒಟ್ಟು 6 ಹಾಡುಗಳು ಮೂಡಿ ಬಂದಿದ್ದವು. ಪಿ. ಬಿ ಶ್ರೀನಿವಾಸ್ ಹಾಗೂ ವಾಣಿ ಜಯರಾಂ ಈ ಹಾಡಿಗೆ ದನಿಯಾಗಿದ್ದರು.

30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಚಿತ್ರದ ಆಲ್ಬಮ್‌ ಕೂಡ ಸೂಪರ್ ಹಿಟ್ ಆಗಿತ್ತು. ಎಲ್ಲಾ ಹಾಡುಗಳಿಗೆ ಚಿ. ಉದಯಶಂಕರ್ ಸಾಹಿತ್ಯ ಬರೆದಿದ್ದರು.

ಇದೀಗ ಅಣ್ಣಾವ್ರ ಹಾಡನ್ನು ಮಲಯಾಳಂ ನಟ ಮೋಹನ್ ಲಾಲ್ ಹಾಡುತ್ತಿರುವುದು ನೆಟ್ಟಿಗರ ಗಮನ ಸೆಳೆದಿದೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ..

Ramesh Babu

Journalist

Share
Published by
Ramesh Babu

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

12 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

13 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

16 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago