Categories: ಸಿನಿಮಾ

ಅಣ್ಣವ್ರು ಅಭಿನಯದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಗುನುಗಿದ ಮಲಯಾಳಂ ನಟ ಮೋಹನ್​ಲಾಲ್

ಡಾ.ರಾಜ್​ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್​ಲಾಲ್ ಅವರು ಮೊಬೈಲ್‌ನಲ್ಲಿ ಅಣ್ಣಾವ್ರ ಹಾಡು ನೋಡುತ್ತಾ ಗುನುಗಿರುವ ವೀಡಿಯೋ ವೈರಲ್ ಆಗುತ್ತಿದೆ. ನಟನ ಈ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಡಾ. ರಾಜ್‌ಕುಮಾರ್ ನಟನೆಯ ಸಿನಿಮಾಗಳು ಮಾತ್ರವಲ್ಲ, ಆ ಸಿನಿಮಾಗಳ ಎಲ್ಲಾ ಹಾಡುಗಳು ಸೂಪರ್ ಹಿಟ್‌ ಆಗಿವೆ.

50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರ್- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು. ರಾಜನ್‌-ನಾಗೇಂದ್ರ ಸಂಗೀತದಲ್ಲಿ ಒಟ್ಟು 6 ಹಾಡುಗಳು ಮೂಡಿ ಬಂದಿದ್ದವು. ಪಿ. ಬಿ ಶ್ರೀನಿವಾಸ್ ಹಾಗೂ ವಾಣಿ ಜಯರಾಂ ಈ ಹಾಡಿಗೆ ದನಿಯಾಗಿದ್ದರು.

30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಚಿತ್ರದ ಆಲ್ಬಮ್‌ ಕೂಡ ಸೂಪರ್ ಹಿಟ್ ಆಗಿತ್ತು. ಎಲ್ಲಾ ಹಾಡುಗಳಿಗೆ ಚಿ. ಉದಯಶಂಕರ್ ಸಾಹಿತ್ಯ ಬರೆದಿದ್ದರು.

ಇದೀಗ ಅಣ್ಣಾವ್ರ ಹಾಡನ್ನು ಮಲಯಾಳಂ ನಟ ಮೋಹನ್ ಲಾಲ್ ಹಾಡುತ್ತಿರುವುದು ನೆಟ್ಟಿಗರ ಗಮನ ಸೆಳೆದಿದೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ..

Ramesh Babu

Journalist

Share
Published by
Ramesh Babu

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

6 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

13 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

14 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago