Categories: ಸಿನಿಮಾ

ಅಣ್ಣವ್ರು ಅಭಿನಯದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಗುನುಗಿದ ಮಲಯಾಳಂ ನಟ ಮೋಹನ್​ಲಾಲ್

ಡಾ.ರಾಜ್​ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್​ಲಾಲ್ ಅವರು ಮೊಬೈಲ್‌ನಲ್ಲಿ ಅಣ್ಣಾವ್ರ ಹಾಡು ನೋಡುತ್ತಾ ಗುನುಗಿರುವ ವೀಡಿಯೋ ವೈರಲ್ ಆಗುತ್ತಿದೆ. ನಟನ ಈ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಡಾ. ರಾಜ್‌ಕುಮಾರ್ ನಟನೆಯ ಸಿನಿಮಾಗಳು ಮಾತ್ರವಲ್ಲ, ಆ ಸಿನಿಮಾಗಳ ಎಲ್ಲಾ ಹಾಡುಗಳು ಸೂಪರ್ ಹಿಟ್‌ ಆಗಿವೆ.

50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರ್- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು. ರಾಜನ್‌-ನಾಗೇಂದ್ರ ಸಂಗೀತದಲ್ಲಿ ಒಟ್ಟು 6 ಹಾಡುಗಳು ಮೂಡಿ ಬಂದಿದ್ದವು. ಪಿ. ಬಿ ಶ್ರೀನಿವಾಸ್ ಹಾಗೂ ವಾಣಿ ಜಯರಾಂ ಈ ಹಾಡಿಗೆ ದನಿಯಾಗಿದ್ದರು.

30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಚಿತ್ರದ ಆಲ್ಬಮ್‌ ಕೂಡ ಸೂಪರ್ ಹಿಟ್ ಆಗಿತ್ತು. ಎಲ್ಲಾ ಹಾಡುಗಳಿಗೆ ಚಿ. ಉದಯಶಂಕರ್ ಸಾಹಿತ್ಯ ಬರೆದಿದ್ದರು.

ಇದೀಗ ಅಣ್ಣಾವ್ರ ಹಾಡನ್ನು ಮಲಯಾಳಂ ನಟ ಮೋಹನ್ ಲಾಲ್ ಹಾಡುತ್ತಿರುವುದು ನೆಟ್ಟಿಗರ ಗಮನ ಸೆಳೆದಿದೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ..

Ramesh Babu

Journalist

Share
Published by
Ramesh Babu

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

15 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

19 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

19 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

22 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago