Categories: ಲೇಖನ

“ಅಣ್ಣ–ತಂಗಿಯರ ಬಾಂಧವ್ಯ ಗಟ್ಟಿಗೊಳಿಸುವ ರಕ್ಷಾ ಬಂಧನ”

ಭಾರತ ರಾಷ್ಟ್ರವೊಂದು ಹೆಚ್ಚಾಗಿ ಸಂಸ್ಕೃತಿ, ಆಚಾರ-ವಿಚಾರ, ವಿಶಿಷ್ಟ ಆಚರಣೆ ಮೆರೆಯುವ ತವರು ನಾಡು. ಇಲ್ಲಿ ಪ್ರತಿಯೊಂದು ಆಚರಣೆಗೂ ಹಾಗೂ ಹಬ್ಬಕ್ಕೂ ಒಂದೊಂದು ತನ್ನದೇ ಆದ ವೈಶಿಷ್ಟತೆಯಿದೆ. ಪ್ರತಿಯೊಂದು ಹಬ್ಬವೂ ಒಂದಲ್ಲ, ಒಂದು ರೀತಿ ಒಳ್ಳೆಯ ಸಾರವನ್ನು ಹೇಳುತ್ತದೆ. ಎಲ್ಲಾ ಹಬ್ಬದಂತೆಯೇ ‘ರಕ್ಷಾಬಂಧನ’ ಹಬ್ಬವೂ ನೂಲ ಹುಣ್ಣಿಮೆಯಂದು ಆಚರಿಸುವ ಹಬ್ಬವಾಗಿದ್ದು, ಈ ಹಬ್ಬ ಸಂಬಂಧ-ಬಾಂಧವ್ಯಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ಪ್ರೀತಿ-ವಿಶ್ವಾಸ ಸಂಕೇತಿಸುವ ಅರ್ಥಪೂರ್ಣ ಹಬ್ಬವಾಗಿದೆ.

ಇಂದು ಆಗಸ್ಟ್ 09 ರಂದು ದೇಶಾದ್ಯಂತ ‘ರಕ್ಷಾ ಬಂಧನ’ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಬ್ಬ ಸಮೀಪಿಸುತ್ತಿದ್ದಂತೆ ಸಹೋದರಿಯರಿಗೆ ಎಲ್ಲಿಲ್ಲದ ಸಡಗರ ಸಂಭ್ರಮ ಅವರ ಮುಖದಲ್ಲಿ ಮನೆಮಾಡಿರುತ್ತದೆ ಎಂದರೆ ತಪ್ಪಾಗದು.

ರಕ್ಷಾ ಬಂಧನ ಹಬ್ಬದ ದಿನ ಸಹೋದರಿಯರು ತಮ್ಮ ಸಹೋದರನ ಹಣೆಗೆ ತಿಲಕ, ಬಲಗೈಗೆ ರಾಖಿಯನ್ನು ಕಟ್ಟಿ, ಆರತಿ ಬೆಳಗುವ ಮೂಲಕ ಸಹೋದರನ ಆಶಿರ್ವಾದವನ್ನು ಬೇಡುತ್ತಾರೆ. ಜತೆಗೆ ತನ್ನ ಅಣ್ಣ ಸದಾ ಖುಷಿಯಿಂದ ಇರಲೆಂದು ದೇವರಲ್ಲಿ ಮೊರೆ ಇಡುತ್ತಾಳೆ. ರಾಖಿ ಕಟ್ಟಿದ ಪ್ರತಿಯಾಗಿ ತಂಗಿಗೆ ಅಣ್ಣನು ಪ್ರೀತಿಯಿಂದ ಉಡುಗೊರೆ ನೀಡುವ ಸಂಪ್ರದಾಯ ನಡೆದು ಬಂದಿದೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಪರಿಶುದ್ಧ ಭಾವನೆ ಗಟ್ಟಿಗೊಳಿಸುವ ಹಬ್ಬ.

ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ’ ಅಥವಾ ‘ರಾಖಿ’ ಹಬ್ಬವನ್ನ ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಿದ್ದಾರೆ. ಪ್ರತಿಯೊಬ್ಬ ಅಣ್ಣ-ತಂಗಿಯರ ಬಾಂಧವ್ಯವನ್ನು ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಹತ್ತಾರು ಸಿಹಿ-ಕಹಿ ನೆನಪುಗಳನ್ನು ಮೆಲಕು ಹಾಕಿಸುತ್ತದೆ.

*ಬೆಲೆ ಕಟ್ಟಕ್ಕಾಗದ ಸಂಬಂಧದ ಹಬ್ಬ:*

ಭೂಮಿ ಮೇಲಿನ ಕೆಲವು ಸಂಬಂಧಗಳಿಗೆ ಎಂದಿಗೂ ಬೆಲೆ ಕಟ್ಟಲಾಗದು. ತಂದೆ-ತಾಯಿ ನೀಡುವ ಪ್ರೀತಿ-ಕಾಳಜಿಗೆ ಯಾವತ್ತು ಬೆಲೆ ಕಟ್ಟಲು ಸಾಧ್ಯವಿಲ್ಲ, ಇದೇ ಸಾಲಿನಲ್ಲಿ ಸಹೋದರ ಮತ್ತು ಸಹೋದರಿ ತೋರುವ ಅಕ್ಕರೆಯ ಸಂಬಂಧವು ನಿಲ್ಲುತ್ತದೆ. ಸಹೋದರನು ಯಾವುದೇ ಪರಿಸ್ಥಿತಿಯಲ್ಲೂ ತನ್ನ ಸಹೋದರಿ ರಕ್ಷಣೆಗೆ ನಿಂತು ಕಾಪಾಡುವನು. ಸಹೋದರ ಮತ್ತು ಸಹೋದರಿಯ ಸಂಬಂಧದ ಮಹತ್ವವನ್ನು ಸಾರುವಂತಹ ರಕ್ಷಾ ಬಂಧನವು ಪ್ರಮುಖವಾಗಿ ಭಾರತೀಯರು ಹೆಚ್ಚಾಗಿ ಆಚರಿಸಿಕೊಳ್ಳುವರು. ಇದು ಹಿಂದೂಗಳ ಹಬ್ಬವಾದರೂ ಹೆಚ್ಚಿನ ಧರ್ಮಗಳಲ್ಲಿ ಇದನ್ನು ಆಚರಿಸಲಾಗುತ್ತದೆ.

*ಪೌರಾಣಿಕವಾಗಿ ರಕ್ಷಾ ಬಂಧನ:*

ವ್ರತ್ರ ಅಸುರನಿಂದ ಸೋಲನ್ನು ಎದುರಿಸುತ್ತಿದ್ದಾಗ ಇಂದ್ರನಿಗೆ ತನ್ನ ಶತ್ರುಗಳಿಂದ ರಕ್ಷಣೆ ಪಡೆಯಬೇಕಾದರೆ ಕೈಗೆ ರಾಖಿ ಕಟ್ಟಿಕೊಳ್ಳಬೇಕು ಎಂದು ಗುರು ಬ್ರಹಸ್ಪತಿ ಅವರು ಹೇಳಿದರು. ಬ್ರಹಸ್ಪತಿ ಅವರ ಮಾತಿನಂತೆ ಇಂದ್ರನ ಧರ್ಮಪತ್ನಿಯಾದ ಸಚಿ ದೇವಿಯು ಇಂದ್ರನಿಗೆ ರಾಖಿ ಕಟ್ಟಿದಳು ಎಂದು ಭವಿಷ್ಯ ಪುರಾಣದಲ್ಲಿದೆ.

*ವರದಿ: ರೇವಣಸಿದ್ಧ ಬಗಲಿ*
(ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ)

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 hour ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

3 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

4 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

18 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

24 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago