ಭಾರತ ರಾಷ್ಟ್ರವೊಂದು ಹೆಚ್ಚಾಗಿ ಸಂಸ್ಕೃತಿ, ಆಚಾರ-ವಿಚಾರ, ವಿಶಿಷ್ಟ ಆಚರಣೆ ಮೆರೆಯುವ ತವರು ನಾಡು. ಇಲ್ಲಿ ಪ್ರತಿಯೊಂದು ಆಚರಣೆಗೂ ಹಾಗೂ ಹಬ್ಬಕ್ಕೂ ಒಂದೊಂದು ತನ್ನದೇ ಆದ ವೈಶಿಷ್ಟತೆಯಿದೆ. ಪ್ರತಿಯೊಂದು ಹಬ್ಬವೂ ಒಂದಲ್ಲ, ಒಂದು ರೀತಿ ಒಳ್ಳೆಯ ಸಾರವನ್ನು ಹೇಳುತ್ತದೆ. ಎಲ್ಲಾ ಹಬ್ಬದಂತೆಯೇ ‘ರಕ್ಷಾಬಂಧನ’ ಹಬ್ಬವೂ ನೂಲ ಹುಣ್ಣಿಮೆಯಂದು ಆಚರಿಸುವ ಹಬ್ಬವಾಗಿದ್ದು, ಈ ಹಬ್ಬ ಸಂಬಂಧ-ಬಾಂಧವ್ಯಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ಪ್ರೀತಿ-ವಿಶ್ವಾಸ ಸಂಕೇತಿಸುವ ಅರ್ಥಪೂರ್ಣ ಹಬ್ಬವಾಗಿದೆ.
ಇಂದು ಆಗಸ್ಟ್ 09 ರಂದು ದೇಶಾದ್ಯಂತ ‘ರಕ್ಷಾ ಬಂಧನ’ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಬ್ಬ ಸಮೀಪಿಸುತ್ತಿದ್ದಂತೆ ಸಹೋದರಿಯರಿಗೆ ಎಲ್ಲಿಲ್ಲದ ಸಡಗರ ಸಂಭ್ರಮ ಅವರ ಮುಖದಲ್ಲಿ ಮನೆಮಾಡಿರುತ್ತದೆ ಎಂದರೆ ತಪ್ಪಾಗದು.
ರಕ್ಷಾ ಬಂಧನ ಹಬ್ಬದ ದಿನ ಸಹೋದರಿಯರು ತಮ್ಮ ಸಹೋದರನ ಹಣೆಗೆ ತಿಲಕ, ಬಲಗೈಗೆ ರಾಖಿಯನ್ನು ಕಟ್ಟಿ, ಆರತಿ ಬೆಳಗುವ ಮೂಲಕ ಸಹೋದರನ ಆಶಿರ್ವಾದವನ್ನು ಬೇಡುತ್ತಾರೆ. ಜತೆಗೆ ತನ್ನ ಅಣ್ಣ ಸದಾ ಖುಷಿಯಿಂದ ಇರಲೆಂದು ದೇವರಲ್ಲಿ ಮೊರೆ ಇಡುತ್ತಾಳೆ. ರಾಖಿ ಕಟ್ಟಿದ ಪ್ರತಿಯಾಗಿ ತಂಗಿಗೆ ಅಣ್ಣನು ಪ್ರೀತಿಯಿಂದ ಉಡುಗೊರೆ ನೀಡುವ ಸಂಪ್ರದಾಯ ನಡೆದು ಬಂದಿದೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಪರಿಶುದ್ಧ ಭಾವನೆ ಗಟ್ಟಿಗೊಳಿಸುವ ಹಬ್ಬ.
ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ’ ಅಥವಾ ‘ರಾಖಿ’ ಹಬ್ಬವನ್ನ ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಿದ್ದಾರೆ. ಪ್ರತಿಯೊಬ್ಬ ಅಣ್ಣ-ತಂಗಿಯರ ಬಾಂಧವ್ಯವನ್ನು ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಹತ್ತಾರು ಸಿಹಿ-ಕಹಿ ನೆನಪುಗಳನ್ನು ಮೆಲಕು ಹಾಕಿಸುತ್ತದೆ.
*ಬೆಲೆ ಕಟ್ಟಕ್ಕಾಗದ ಸಂಬಂಧದ ಹಬ್ಬ:*
ಭೂಮಿ ಮೇಲಿನ ಕೆಲವು ಸಂಬಂಧಗಳಿಗೆ ಎಂದಿಗೂ ಬೆಲೆ ಕಟ್ಟಲಾಗದು. ತಂದೆ-ತಾಯಿ ನೀಡುವ ಪ್ರೀತಿ-ಕಾಳಜಿಗೆ ಯಾವತ್ತು ಬೆಲೆ ಕಟ್ಟಲು ಸಾಧ್ಯವಿಲ್ಲ, ಇದೇ ಸಾಲಿನಲ್ಲಿ ಸಹೋದರ ಮತ್ತು ಸಹೋದರಿ ತೋರುವ ಅಕ್ಕರೆಯ ಸಂಬಂಧವು ನಿಲ್ಲುತ್ತದೆ. ಸಹೋದರನು ಯಾವುದೇ ಪರಿಸ್ಥಿತಿಯಲ್ಲೂ ತನ್ನ ಸಹೋದರಿ ರಕ್ಷಣೆಗೆ ನಿಂತು ಕಾಪಾಡುವನು. ಸಹೋದರ ಮತ್ತು ಸಹೋದರಿಯ ಸಂಬಂಧದ ಮಹತ್ವವನ್ನು ಸಾರುವಂತಹ ರಕ್ಷಾ ಬಂಧನವು ಪ್ರಮುಖವಾಗಿ ಭಾರತೀಯರು ಹೆಚ್ಚಾಗಿ ಆಚರಿಸಿಕೊಳ್ಳುವರು. ಇದು ಹಿಂದೂಗಳ ಹಬ್ಬವಾದರೂ ಹೆಚ್ಚಿನ ಧರ್ಮಗಳಲ್ಲಿ ಇದನ್ನು ಆಚರಿಸಲಾಗುತ್ತದೆ.
*ಪೌರಾಣಿಕವಾಗಿ ರಕ್ಷಾ ಬಂಧನ:*
ವ್ರತ್ರ ಅಸುರನಿಂದ ಸೋಲನ್ನು ಎದುರಿಸುತ್ತಿದ್ದಾಗ ಇಂದ್ರನಿಗೆ ತನ್ನ ಶತ್ರುಗಳಿಂದ ರಕ್ಷಣೆ ಪಡೆಯಬೇಕಾದರೆ ಕೈಗೆ ರಾಖಿ ಕಟ್ಟಿಕೊಳ್ಳಬೇಕು ಎಂದು ಗುರು ಬ್ರಹಸ್ಪತಿ ಅವರು ಹೇಳಿದರು. ಬ್ರಹಸ್ಪತಿ ಅವರ ಮಾತಿನಂತೆ ಇಂದ್ರನ ಧರ್ಮಪತ್ನಿಯಾದ ಸಚಿ ದೇವಿಯು ಇಂದ್ರನಿಗೆ ರಾಖಿ ಕಟ್ಟಿದಳು ಎಂದು ಭವಿಷ್ಯ ಪುರಾಣದಲ್ಲಿದೆ.
*ವರದಿ: ರೇವಣಸಿದ್ಧ ಬಗಲಿ*
(ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ)
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…