ಅಣ್ಣ ತಂಗಿಯ ಲವ್ – ಅಕ್ರಮ ಸಂಬಂಧ….?- ತಂಗಿಯ ಸಾವಿನಲ್ಲಿ ಅಂತ್ಯ.!

ಚಿಕ್ಕಬಳ್ಳಾಪುರ- ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ ರೀತಿ ಇದೆ. ಅವರಿಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಅವನಿಗೆ 30 ವರ್ಷ, ಆಕೆಗೆ 21 ವರ್ಷ ವಯಸ್ಸು. ಆದ್ರೂ ಅವರಿಬ್ಬರು ಅಣ್ಣ ತಂಗಿ ಅನ್ನೋ ಪವಿತ್ರ ಸಂಬಂಧಕ್ಕೆ ವಿರುದ್ದವಾಗಿ, ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧದಲ್ಲಿ ತೇಲಾಡ್ತಿದ್ರಂತೆ. ಇದನ್ನು ಕಂಡ, ಬಂಧು ಬಳಗ, ಗ್ರಾಮಸ್ಥರು ಬೈಯ್ದು ಬುದ್ದಿ ಹೇಳಿದ್ರಂತೆ.. ಕೇಳದೆ ಲಿವಿಂಗ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ರಂತೆ, ಆದ್ರೆ ಈಗ ಆಕೆ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದಲ್ಲಿ ನಡೆದಿದೆ.

ಅಂದಹಾಗೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ರಾಮಕೃಷ್ಣಪುರದ ನಿವಾಸಿ ರಾಮಲಕ್ಷ್ಮಿ ಮೃತ ಯುವತಿ. ರಾಮಕೃಷ್ಣಾಪುರದ ಈ ರಾಮಲಕ್ಷ್ಮಿ ಹಾಗೂ ಈಕೆಯ ಸಹೋದರ ಸಂಬಂಧಿ ದೊಡ್ಡಪ್ಪನ ಮಗನಾದ ಕೃಷ್ಣ ಇಬ್ಬರು ಪರಸ್ಪರ ಪ್ರೀತಿ ಪ್ರೇಮ ಅಂತ ಅಕ್ರಮ ಸಂಬಂಧ ಸಹ ಹೊಂದಿದ್ರಂತೆ, ಈ ವಿಚಾರ ಗೊತ್ತಾಗಿ ಎರಡು ಕುಟುಂಬಗಳ ಬಂಧು ಬಳಗ, ಇಬ್ಬರಿಗೂ ಬೈಯ್ದು ಬುದ್ದಿವಾದ ಹೇಳಿದ್ರು. ಕೊನೆಗೆ ರಾಮಕೃಷ್ಣಪುರದಲ್ಲಿ ಒಂದು ಕುಟುಂಬ. ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಒಂದು ಕುಟುಂಬವಾಗಿ ಪ್ರತ್ಯೇಕವಾಗಿ ನೆಲೆಸಿದ್ರು. ಮತ್ತೊಂದೆಡೆ ಕೃಷ್ಣನಿಗೆ ಬೇರೆ ಹುಡುಗಿಯೊಬ್ಬಳ ಜೊತೆ ಮದುವೆಯನ್ನು  ಸಹ ಮಾಡಿಸಿದ್ರಂತೆ, ಆದ್ರೂ ಕೃಷ್ಣ ತನ್ನ ತಂಗಿ ರಾಮಲಕ್ಷ್ಮಿ ಯನ್ನು ಬಿಡದೆ… ಅವಳ ತಲೆ ಕೆಡಿಸಿ ಪೇರೇಸಂದ್ರದಲ್ಲಿ ಪ್ರತ್ಯೇಕ ಮನೆ ಮಾಡಿ ಕಳ್ಳ ಸಂಸಾರ ಮಾಡ್ತಾ ಇದ್ನಂತೆ, ಈಗ ನೋಡಿದ್ರೆ… ರಾಮಲಕ್ಷ್ಮಿ ಪೇರೇಸಂದ್ರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಅವಳ ಸಾವಿಗೆ ಅಣ್ಣ ವರಸೆಯ ಕೃಷ್ಣನೆ ಕಾರಣ ಎಂದು ಮೃತಳ ಅಕ್ಕ‌ ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ತಂಗಿ ಸಾವಿನ ಮನೆ ಸೇರಿದ್ರೆ… ಅಣ್ಣ ಪೆರೇಸಂದ್ರ ಪೊಲೀಸರ ಭಯದಿಂದ ನಾಪತ್ತೆಯಾಗಿದ್ದು, ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

49 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

14 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

18 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

21 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago