ಅಣ್ಣ ತಂಗಿಯ ಲವ್ – ಅಕ್ರಮ ಸಂಬಂಧ….?- ತಂಗಿಯ ಸಾವಿನಲ್ಲಿ ಅಂತ್ಯ.!

ಚಿಕ್ಕಬಳ್ಳಾಪುರ- ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ ರೀತಿ ಇದೆ. ಅವರಿಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಅವನಿಗೆ 30 ವರ್ಷ, ಆಕೆಗೆ 21 ವರ್ಷ ವಯಸ್ಸು. ಆದ್ರೂ ಅವರಿಬ್ಬರು ಅಣ್ಣ ತಂಗಿ ಅನ್ನೋ ಪವಿತ್ರ ಸಂಬಂಧಕ್ಕೆ ವಿರುದ್ದವಾಗಿ, ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧದಲ್ಲಿ ತೇಲಾಡ್ತಿದ್ರಂತೆ. ಇದನ್ನು ಕಂಡ, ಬಂಧು ಬಳಗ, ಗ್ರಾಮಸ್ಥರು ಬೈಯ್ದು ಬುದ್ದಿ ಹೇಳಿದ್ರಂತೆ.. ಕೇಳದೆ ಲಿವಿಂಗ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ರಂತೆ, ಆದ್ರೆ ಈಗ ಆಕೆ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದಲ್ಲಿ ನಡೆದಿದೆ.

ಅಂದಹಾಗೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ರಾಮಕೃಷ್ಣಪುರದ ನಿವಾಸಿ ರಾಮಲಕ್ಷ್ಮಿ ಮೃತ ಯುವತಿ. ರಾಮಕೃಷ್ಣಾಪುರದ ಈ ರಾಮಲಕ್ಷ್ಮಿ ಹಾಗೂ ಈಕೆಯ ಸಹೋದರ ಸಂಬಂಧಿ ದೊಡ್ಡಪ್ಪನ ಮಗನಾದ ಕೃಷ್ಣ ಇಬ್ಬರು ಪರಸ್ಪರ ಪ್ರೀತಿ ಪ್ರೇಮ ಅಂತ ಅಕ್ರಮ ಸಂಬಂಧ ಸಹ ಹೊಂದಿದ್ರಂತೆ, ಈ ವಿಚಾರ ಗೊತ್ತಾಗಿ ಎರಡು ಕುಟುಂಬಗಳ ಬಂಧು ಬಳಗ, ಇಬ್ಬರಿಗೂ ಬೈಯ್ದು ಬುದ್ದಿವಾದ ಹೇಳಿದ್ರು. ಕೊನೆಗೆ ರಾಮಕೃಷ್ಣಪುರದಲ್ಲಿ ಒಂದು ಕುಟುಂಬ. ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಒಂದು ಕುಟುಂಬವಾಗಿ ಪ್ರತ್ಯೇಕವಾಗಿ ನೆಲೆಸಿದ್ರು. ಮತ್ತೊಂದೆಡೆ ಕೃಷ್ಣನಿಗೆ ಬೇರೆ ಹುಡುಗಿಯೊಬ್ಬಳ ಜೊತೆ ಮದುವೆಯನ್ನು  ಸಹ ಮಾಡಿಸಿದ್ರಂತೆ, ಆದ್ರೂ ಕೃಷ್ಣ ತನ್ನ ತಂಗಿ ರಾಮಲಕ್ಷ್ಮಿ ಯನ್ನು ಬಿಡದೆ… ಅವಳ ತಲೆ ಕೆಡಿಸಿ ಪೇರೇಸಂದ್ರದಲ್ಲಿ ಪ್ರತ್ಯೇಕ ಮನೆ ಮಾಡಿ ಕಳ್ಳ ಸಂಸಾರ ಮಾಡ್ತಾ ಇದ್ನಂತೆ, ಈಗ ನೋಡಿದ್ರೆ… ರಾಮಲಕ್ಷ್ಮಿ ಪೇರೇಸಂದ್ರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಅವಳ ಸಾವಿಗೆ ಅಣ್ಣ ವರಸೆಯ ಕೃಷ್ಣನೆ ಕಾರಣ ಎಂದು ಮೃತಳ ಅಕ್ಕ‌ ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ತಂಗಿ ಸಾವಿನ ಮನೆ ಸೇರಿದ್ರೆ… ಅಣ್ಣ ಪೆರೇಸಂದ್ರ ಪೊಲೀಸರ ಭಯದಿಂದ ನಾಪತ್ತೆಯಾಗಿದ್ದು, ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

2 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

5 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

10 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

11 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

11 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

13 hours ago