Categories: ರಾಜ್ಯ

ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನ

ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉನ್ನತ ಶಿಕ್ಷಣ ಸಚಿವರಾದ  ಡಾ.ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ಘೋಷಿಸಿದರು.

ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾನು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ಗೌರವಧನ ಹೆಚ್ಚಳಕ್ಕೆ ಮುಂದಾಗಿದೆ ಎಂದರು.

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಇದರ ಜೊತೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು ಎಂದು ಹೇಳಿದರು.

ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ಇದೆ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡುತ್ತೇನೆ ಎಂದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago