ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಮತ್ತು ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ಘೋಷಿಸಿದರು.
ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾನು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ಗೌರವಧನ ಹೆಚ್ಚಳಕ್ಕೆ ಮುಂದಾಗಿದೆ ಎಂದರು.
ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಇದರ ಜೊತೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು ಎಂದು ಹೇಳಿದರು.
ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ಇದೆ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡುತ್ತೇನೆ ಎಂದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…