ಅತಿಥಿ ಉಪನ್ಯಾಸಕರ ಹೋರಾಟಕ್ಕೆ ತಾತ್ಕಾಲಿಕ ಜಯ

ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯಾದ್ಯಂತ ಸುಮಾರು ಒಂದು ತಿಂಗಳಿಯಿಂದ ನಡೆದ ಧರಣಿ, ಪ್ರತಿಭಟನೆಗೆ ಕೊನೆಗೂ ರಾಜ್ಯ ಸರಕಾರ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂಪಾಯಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ಇದು ಹೋರಾಟಕ್ಕೆ ಸಂದ ತಾತ್ಕಾಲಿಕ ಜಯ ಅಷ್ಟೇ ನಮ್ಮ ಪೂರ್ಣ ಪ್ರಮಾಣದ ಬೇಡಿಕೆಗಳನ್ನು ರಾಜ್ಯ ಸರಕಾರ ಪರಿಗಣಿಸಬೇಕಾಗಿದೆ ಎಂದು ಅತಿಥಿ ಉಪನ್ಯಾಸಕ ಸಂಘದ ರಾಜ್ಯ ಅಧ್ಯಕ್ಷ ನಾಗನಾಳ ಮುನಿಯಪ್ಪ ತಿಳಿಸಿದರು.

ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ, ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಆದರೆ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ವಿಲಿನತೆ ಸೇರಿದಂತೆ ಸೇವಾ  ಖಾಯಂಗಾಗಿ ಸರಕಾರ ಮುಂದಾಗಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರಕಾರವು ಅತಿಥಿ ಉಪನ್ಯಾಸಕರು 60 ವರ್ಷ ಪೂರೈಸಿ ಕೆಲಸ ಬಿಡುವಾಗ 5 ಲಕ್ಷ ನೀಡಲು ಸರಕಾರ ತೀರ್ಮಾನ ಮಾಡಲಾಗಿದೆ. ಇದು ಒಳ್ಳೆಯ ತೀರ್ಮಾನವೇ ಆದರೆ, ವೇತನವನ್ನು ಹತ್ತು ತಿಂಗಳಿಗೆ ಬದಲಾಗಿ ವರ್ಷದ 12 ತಿಂಗಳು ವೇತನ ನೀಡಬೇಕು ಜೊತೆಗೆ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ಜೊತೆಗೆ ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಪದೇ ಪದೇ ನಮ್ಮನ್ನು ಸಂದರ್ಶನ ಮಾಡದಂತೆ ನೇಮಕ ಮಾಡಿಕೊಳ್ಳಬೇಕು ಸರಕಾರವು ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಜಾರಿ ಮಾಡುವ ತನಕ ಅತಿಥಿ ಉಪನ್ಯಾಸಕರು ತರಗತಿಗಳಿಗೆ ಹೋಗದಂತೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷ ರವಿಕುಮಾರ್, ರಾಜ್ಯ ಮಹಿಳಾ ಸಂಚಾಲಕಿ ಸಿ.ಎನ್ ನಾಗಮಣಿ, ಮುಖಂಡರಾದ ಆರ್.ಲಕ್ಷ್ಮೀನಾರಾಯಣ್, ಸರಿತಾ ಕುಮಾರಿ, ನೂರ್ ಅಹಮದ್, ಶಹಬಾಜಾ ಅಹಮದ್, ಕೆ.ಎನ್ ತ್ಯಾಗರಾಜ್, ತೋಕಲಘಟ್ಟ ರವೀಂದ್ರ, ಎ.ಬಿ ರಮೇಶ್, ಮುಂತಾದವರು ಇದ್ದರು

Ramesh Babu

Journalist

Recent Posts

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

38 minutes ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

2 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

2 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

6 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

13 hours ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

1 day ago