ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯಾದ್ಯಂತ ಸುಮಾರು ಒಂದು ತಿಂಗಳಿಯಿಂದ ನಡೆದ ಧರಣಿ, ಪ್ರತಿಭಟನೆಗೆ ಕೊನೆಗೂ ರಾಜ್ಯ ಸರಕಾರ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂಪಾಯಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ಇದು ಹೋರಾಟಕ್ಕೆ ಸಂದ ತಾತ್ಕಾಲಿಕ ಜಯ ಅಷ್ಟೇ ನಮ್ಮ ಪೂರ್ಣ ಪ್ರಮಾಣದ ಬೇಡಿಕೆಗಳನ್ನು ರಾಜ್ಯ ಸರಕಾರ ಪರಿಗಣಿಸಬೇಕಾಗಿದೆ ಎಂದು ಅತಿಥಿ ಉಪನ್ಯಾಸಕ ಸಂಘದ ರಾಜ್ಯ ಅಧ್ಯಕ್ಷ ನಾಗನಾಳ ಮುನಿಯಪ್ಪ ತಿಳಿಸಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ, ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಆದರೆ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ವಿಲಿನತೆ ಸೇರಿದಂತೆ ಸೇವಾ ಖಾಯಂಗಾಗಿ ಸರಕಾರ ಮುಂದಾಗಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರಕಾರವು ಅತಿಥಿ ಉಪನ್ಯಾಸಕರು 60 ವರ್ಷ ಪೂರೈಸಿ ಕೆಲಸ ಬಿಡುವಾಗ 5 ಲಕ್ಷ ನೀಡಲು ಸರಕಾರ ತೀರ್ಮಾನ ಮಾಡಲಾಗಿದೆ. ಇದು ಒಳ್ಳೆಯ ತೀರ್ಮಾನವೇ ಆದರೆ, ವೇತನವನ್ನು ಹತ್ತು ತಿಂಗಳಿಗೆ ಬದಲಾಗಿ ವರ್ಷದ 12 ತಿಂಗಳು ವೇತನ ನೀಡಬೇಕು ಜೊತೆಗೆ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ಜೊತೆಗೆ ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಪದೇ ಪದೇ ನಮ್ಮನ್ನು ಸಂದರ್ಶನ ಮಾಡದಂತೆ ನೇಮಕ ಮಾಡಿಕೊಳ್ಳಬೇಕು ಸರಕಾರವು ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಜಾರಿ ಮಾಡುವ ತನಕ ಅತಿಥಿ ಉಪನ್ಯಾಸಕರು ತರಗತಿಗಳಿಗೆ ಹೋಗದಂತೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷ ರವಿಕುಮಾರ್, ರಾಜ್ಯ ಮಹಿಳಾ ಸಂಚಾಲಕಿ ಸಿ.ಎನ್ ನಾಗಮಣಿ, ಮುಖಂಡರಾದ ಆರ್.ಲಕ್ಷ್ಮೀನಾರಾಯಣ್, ಸರಿತಾ ಕುಮಾರಿ, ನೂರ್ ಅಹಮದ್, ಶಹಬಾಜಾ ಅಹಮದ್, ಕೆ.ಎನ್ ತ್ಯಾಗರಾಜ್, ತೋಕಲಘಟ್ಟ ರವೀಂದ್ರ, ಎ.ಬಿ ರಮೇಶ್, ಮುಂತಾದವರು ಇದ್ದರು
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…