ಅತಿಥಿ ಉಪನ್ಯಾಸಕರ ಹೋರಾಟಕ್ಕೆ ತಾತ್ಕಾಲಿಕ ಜಯ

ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯಾದ್ಯಂತ ಸುಮಾರು ಒಂದು ತಿಂಗಳಿಯಿಂದ ನಡೆದ ಧರಣಿ, ಪ್ರತಿಭಟನೆಗೆ ಕೊನೆಗೂ ರಾಜ್ಯ ಸರಕಾರ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂಪಾಯಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ಇದು ಹೋರಾಟಕ್ಕೆ ಸಂದ ತಾತ್ಕಾಲಿಕ ಜಯ ಅಷ್ಟೇ ನಮ್ಮ ಪೂರ್ಣ ಪ್ರಮಾಣದ ಬೇಡಿಕೆಗಳನ್ನು ರಾಜ್ಯ ಸರಕಾರ ಪರಿಗಣಿಸಬೇಕಾಗಿದೆ ಎಂದು ಅತಿಥಿ ಉಪನ್ಯಾಸಕ ಸಂಘದ ರಾಜ್ಯ ಅಧ್ಯಕ್ಷ ನಾಗನಾಳ ಮುನಿಯಪ್ಪ ತಿಳಿಸಿದರು.

ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ, ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಆದರೆ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ವಿಲಿನತೆ ಸೇರಿದಂತೆ ಸೇವಾ  ಖಾಯಂಗಾಗಿ ಸರಕಾರ ಮುಂದಾಗಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರಕಾರವು ಅತಿಥಿ ಉಪನ್ಯಾಸಕರು 60 ವರ್ಷ ಪೂರೈಸಿ ಕೆಲಸ ಬಿಡುವಾಗ 5 ಲಕ್ಷ ನೀಡಲು ಸರಕಾರ ತೀರ್ಮಾನ ಮಾಡಲಾಗಿದೆ. ಇದು ಒಳ್ಳೆಯ ತೀರ್ಮಾನವೇ ಆದರೆ, ವೇತನವನ್ನು ಹತ್ತು ತಿಂಗಳಿಗೆ ಬದಲಾಗಿ ವರ್ಷದ 12 ತಿಂಗಳು ವೇತನ ನೀಡಬೇಕು ಜೊತೆಗೆ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ಜೊತೆಗೆ ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಪದೇ ಪದೇ ನಮ್ಮನ್ನು ಸಂದರ್ಶನ ಮಾಡದಂತೆ ನೇಮಕ ಮಾಡಿಕೊಳ್ಳಬೇಕು ಸರಕಾರವು ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಜಾರಿ ಮಾಡುವ ತನಕ ಅತಿಥಿ ಉಪನ್ಯಾಸಕರು ತರಗತಿಗಳಿಗೆ ಹೋಗದಂತೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷ ರವಿಕುಮಾರ್, ರಾಜ್ಯ ಮಹಿಳಾ ಸಂಚಾಲಕಿ ಸಿ.ಎನ್ ನಾಗಮಣಿ, ಮುಖಂಡರಾದ ಆರ್.ಲಕ್ಷ್ಮೀನಾರಾಯಣ್, ಸರಿತಾ ಕುಮಾರಿ, ನೂರ್ ಅಹಮದ್, ಶಹಬಾಜಾ ಅಹಮದ್, ಕೆ.ಎನ್ ತ್ಯಾಗರಾಜ್, ತೋಕಲಘಟ್ಟ ರವೀಂದ್ರ, ಎ.ಬಿ ರಮೇಶ್, ಮುಂತಾದವರು ಇದ್ದರು

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

8 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

8 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

10 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

18 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

20 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago