ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯಾದ್ಯಂತ ಸುಮಾರು ಒಂದು ತಿಂಗಳಿಯಿಂದ ನಡೆದ ಧರಣಿ, ಪ್ರತಿಭಟನೆಗೆ ಕೊನೆಗೂ ರಾಜ್ಯ ಸರಕಾರ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂಪಾಯಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ಇದು ಹೋರಾಟಕ್ಕೆ ಸಂದ ತಾತ್ಕಾಲಿಕ ಜಯ ಅಷ್ಟೇ ನಮ್ಮ ಪೂರ್ಣ ಪ್ರಮಾಣದ ಬೇಡಿಕೆಗಳನ್ನು ರಾಜ್ಯ ಸರಕಾರ ಪರಿಗಣಿಸಬೇಕಾಗಿದೆ ಎಂದು ಅತಿಥಿ ಉಪನ್ಯಾಸಕ ಸಂಘದ ರಾಜ್ಯ ಅಧ್ಯಕ್ಷ ನಾಗನಾಳ ಮುನಿಯಪ್ಪ ತಿಳಿಸಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ, ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಆದರೆ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ವಿಲಿನತೆ ಸೇರಿದಂತೆ ಸೇವಾ ಖಾಯಂಗಾಗಿ ಸರಕಾರ ಮುಂದಾಗಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರಕಾರವು ಅತಿಥಿ ಉಪನ್ಯಾಸಕರು 60 ವರ್ಷ ಪೂರೈಸಿ ಕೆಲಸ ಬಿಡುವಾಗ 5 ಲಕ್ಷ ನೀಡಲು ಸರಕಾರ ತೀರ್ಮಾನ ಮಾಡಲಾಗಿದೆ. ಇದು ಒಳ್ಳೆಯ ತೀರ್ಮಾನವೇ ಆದರೆ, ವೇತನವನ್ನು ಹತ್ತು ತಿಂಗಳಿಗೆ ಬದಲಾಗಿ ವರ್ಷದ 12 ತಿಂಗಳು ವೇತನ ನೀಡಬೇಕು ಜೊತೆಗೆ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ಜೊತೆಗೆ ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಪದೇ ಪದೇ ನಮ್ಮನ್ನು ಸಂದರ್ಶನ ಮಾಡದಂತೆ ನೇಮಕ ಮಾಡಿಕೊಳ್ಳಬೇಕು ಸರಕಾರವು ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಜಾರಿ ಮಾಡುವ ತನಕ ಅತಿಥಿ ಉಪನ್ಯಾಸಕರು ತರಗತಿಗಳಿಗೆ ಹೋಗದಂತೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷ ರವಿಕುಮಾರ್, ರಾಜ್ಯ ಮಹಿಳಾ ಸಂಚಾಲಕಿ ಸಿ.ಎನ್ ನಾಗಮಣಿ, ಮುಖಂಡರಾದ ಆರ್.ಲಕ್ಷ್ಮೀನಾರಾಯಣ್, ಸರಿತಾ ಕುಮಾರಿ, ನೂರ್ ಅಹಮದ್, ಶಹಬಾಜಾ ಅಹಮದ್, ಕೆ.ಎನ್ ತ್ಯಾಗರಾಜ್, ತೋಕಲಘಟ್ಟ ರವೀಂದ್ರ, ಎ.ಬಿ ರಮೇಶ್, ಮುಂತಾದವರು ಇದ್ದರು
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…