ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯಾದ್ಯಂತ ಸುಮಾರು ಒಂದು ತಿಂಗಳಿಯಿಂದ ನಡೆದ ಧರಣಿ, ಪ್ರತಿಭಟನೆಗೆ ಕೊನೆಗೂ ರಾಜ್ಯ ಸರಕಾರ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂಪಾಯಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ಇದು ಹೋರಾಟಕ್ಕೆ ಸಂದ ತಾತ್ಕಾಲಿಕ ಜಯ ಅಷ್ಟೇ ನಮ್ಮ ಪೂರ್ಣ ಪ್ರಮಾಣದ ಬೇಡಿಕೆಗಳನ್ನು ರಾಜ್ಯ ಸರಕಾರ ಪರಿಗಣಿಸಬೇಕಾಗಿದೆ ಎಂದು ಅತಿಥಿ ಉಪನ್ಯಾಸಕ ಸಂಘದ ರಾಜ್ಯ ಅಧ್ಯಕ್ಷ ನಾಗನಾಳ ಮುನಿಯಪ್ಪ ತಿಳಿಸಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ, ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಆದರೆ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ವಿಲಿನತೆ ಸೇರಿದಂತೆ ಸೇವಾ ಖಾಯಂಗಾಗಿ ಸರಕಾರ ಮುಂದಾಗಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರಕಾರವು ಅತಿಥಿ ಉಪನ್ಯಾಸಕರು 60 ವರ್ಷ ಪೂರೈಸಿ ಕೆಲಸ ಬಿಡುವಾಗ 5 ಲಕ್ಷ ನೀಡಲು ಸರಕಾರ ತೀರ್ಮಾನ ಮಾಡಲಾಗಿದೆ. ಇದು ಒಳ್ಳೆಯ ತೀರ್ಮಾನವೇ ಆದರೆ, ವೇತನವನ್ನು ಹತ್ತು ತಿಂಗಳಿಗೆ ಬದಲಾಗಿ ವರ್ಷದ 12 ತಿಂಗಳು ವೇತನ ನೀಡಬೇಕು ಜೊತೆಗೆ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ಜೊತೆಗೆ ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಪದೇ ಪದೇ ನಮ್ಮನ್ನು ಸಂದರ್ಶನ ಮಾಡದಂತೆ ನೇಮಕ ಮಾಡಿಕೊಳ್ಳಬೇಕು ಸರಕಾರವು ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಜಾರಿ ಮಾಡುವ ತನಕ ಅತಿಥಿ ಉಪನ್ಯಾಸಕರು ತರಗತಿಗಳಿಗೆ ಹೋಗದಂತೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷ ರವಿಕುಮಾರ್, ರಾಜ್ಯ ಮಹಿಳಾ ಸಂಚಾಲಕಿ ಸಿ.ಎನ್ ನಾಗಮಣಿ, ಮುಖಂಡರಾದ ಆರ್.ಲಕ್ಷ್ಮೀನಾರಾಯಣ್, ಸರಿತಾ ಕುಮಾರಿ, ನೂರ್ ಅಹಮದ್, ಶಹಬಾಜಾ ಅಹಮದ್, ಕೆ.ಎನ್ ತ್ಯಾಗರಾಜ್, ತೋಕಲಘಟ್ಟ ರವೀಂದ್ರ, ಎ.ಬಿ ರಮೇಶ್, ಮುಂತಾದವರು ಇದ್ದರು
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…