ಅತಿಥಿ ಉಪನ್ಯಾಸಕರ ಹೋರಾಟಕ್ಕೆ ತಾತ್ಕಾಲಿಕ ಜಯ

ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯಾದ್ಯಂತ ಸುಮಾರು ಒಂದು ತಿಂಗಳಿಯಿಂದ ನಡೆದ ಧರಣಿ, ಪ್ರತಿಭಟನೆಗೆ ಕೊನೆಗೂ ರಾಜ್ಯ ಸರಕಾರ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂಪಾಯಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ಇದು ಹೋರಾಟಕ್ಕೆ ಸಂದ ತಾತ್ಕಾಲಿಕ ಜಯ ಅಷ್ಟೇ ನಮ್ಮ ಪೂರ್ಣ ಪ್ರಮಾಣದ ಬೇಡಿಕೆಗಳನ್ನು ರಾಜ್ಯ ಸರಕಾರ ಪರಿಗಣಿಸಬೇಕಾಗಿದೆ ಎಂದು ಅತಿಥಿ ಉಪನ್ಯಾಸಕ ಸಂಘದ ರಾಜ್ಯ ಅಧ್ಯಕ್ಷ ನಾಗನಾಳ ಮುನಿಯಪ್ಪ ತಿಳಿಸಿದರು.

ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ, ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಆದರೆ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ವಿಲಿನತೆ ಸೇರಿದಂತೆ ಸೇವಾ  ಖಾಯಂಗಾಗಿ ಸರಕಾರ ಮುಂದಾಗಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರಕಾರವು ಅತಿಥಿ ಉಪನ್ಯಾಸಕರು 60 ವರ್ಷ ಪೂರೈಸಿ ಕೆಲಸ ಬಿಡುವಾಗ 5 ಲಕ್ಷ ನೀಡಲು ಸರಕಾರ ತೀರ್ಮಾನ ಮಾಡಲಾಗಿದೆ. ಇದು ಒಳ್ಳೆಯ ತೀರ್ಮಾನವೇ ಆದರೆ, ವೇತನವನ್ನು ಹತ್ತು ತಿಂಗಳಿಗೆ ಬದಲಾಗಿ ವರ್ಷದ 12 ತಿಂಗಳು ವೇತನ ನೀಡಬೇಕು ಜೊತೆಗೆ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ಜೊತೆಗೆ ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಪದೇ ಪದೇ ನಮ್ಮನ್ನು ಸಂದರ್ಶನ ಮಾಡದಂತೆ ನೇಮಕ ಮಾಡಿಕೊಳ್ಳಬೇಕು ಸರಕಾರವು ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಜಾರಿ ಮಾಡುವ ತನಕ ಅತಿಥಿ ಉಪನ್ಯಾಸಕರು ತರಗತಿಗಳಿಗೆ ಹೋಗದಂತೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷ ರವಿಕುಮಾರ್, ರಾಜ್ಯ ಮಹಿಳಾ ಸಂಚಾಲಕಿ ಸಿ.ಎನ್ ನಾಗಮಣಿ, ಮುಖಂಡರಾದ ಆರ್.ಲಕ್ಷ್ಮೀನಾರಾಯಣ್, ಸರಿತಾ ಕುಮಾರಿ, ನೂರ್ ಅಹಮದ್, ಶಹಬಾಜಾ ಅಹಮದ್, ಕೆ.ಎನ್ ತ್ಯಾಗರಾಜ್, ತೋಕಲಘಟ್ಟ ರವೀಂದ್ರ, ಎ.ಬಿ ರಮೇಶ್, ಮುಂತಾದವರು ಇದ್ದರು

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago