ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅರ್ಹ ಅತಿಥಿ ಶಿಕ್ಷಕರನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಪಡೆಯಲು ಉದ್ದೇಶಿಸಿರುವುದರಿಂದ ಸ್ಥಳೀಯ ಅರ್ಹ ಅತಿಥಿ ಶಿಕ್ಷಕರು ತಮ್ಮ ಸ್ವವಿವರಗಳಿರುವ (biodata, resume) ಮನವಿಗಳನ್ನು ಅವಶ್ಯ ದಾಖಲೆಗಳೊಂದಿಗೆ ಈ ಕೆಳಕಂಡ ಕಚೇರಿಗೆ/ಶಾಲೆಗೆ ಸಲ್ಲಿಸುವುದು.

1.ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮಕ್ಕೆ :-ಬಿ.ಎಸ್.ಸಿ/ಬಿ.ಎಡ್ ವಿದ್ಯಾರ್ಹತೆ ಪಡೆದಿರುವ
ಗಣಿತ ಶಿಕ್ಷಕರು,

(11ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ಕನ್ನಡ ಭಾಷಾ ಶಿಕ್ಷಕರು
ವಿದ್ಯಾರ್ಹತೆ:-ಎಂ.ಎ/ಬಿ.ಎಡ್,

ಜೀವಶಾಸ್ತ್ರ ಶಿಕ್ಷಕರು
ವಿದ್ಯಾರ್ಹತೆ:- ಎಂ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

2.ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿ,
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ
(6 ರಿಂದ 10ನೇ ತರಗತಿ- ರಾಜ್ಯ ಪಠ್ಯಕ್ರಮ)
ವಿಜ್ಞಾನ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್,

(11 ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Physics & Mathematics)

ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Chemistry & Biology) ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

3.ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾ||
ಆಂಗ್ಲ ಭಾಷಾ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

4.ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾ||
ಗಣಿತ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25/08/2023, ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು
ಪ್ರಾಂಶುಪಾಲರು, ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ದೂರವಾಣಿ ಸಂಖ್ಯೆ
9632933397,
8660971267,
8310397004,

ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವನಾಯಕನಹಳ್ಳಿ, ದೇವನಹಳ್ಳಿ ತಾ||
9742998287,
9900945262,

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ಗ್ರಾಮ, ನೆಲಮಂಗಲ ತಾಲ್ಲೂಕು.
8317403213,
8660197516

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು.
9739706158,
9986874875,

ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ 080-29787455 ಅನ್ನು ಸಂಪರ್ಕಿಸಬಹುದು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

5 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

8 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

16 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

20 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

23 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago