ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅರ್ಹ ಅತಿಥಿ ಶಿಕ್ಷಕರನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಪಡೆಯಲು ಉದ್ದೇಶಿಸಿರುವುದರಿಂದ ಸ್ಥಳೀಯ ಅರ್ಹ ಅತಿಥಿ ಶಿಕ್ಷಕರು ತಮ್ಮ ಸ್ವವಿವರಗಳಿರುವ (biodata, resume) ಮನವಿಗಳನ್ನು ಅವಶ್ಯ ದಾಖಲೆಗಳೊಂದಿಗೆ ಈ ಕೆಳಕಂಡ ಕಚೇರಿಗೆ/ಶಾಲೆಗೆ ಸಲ್ಲಿಸುವುದು.

1.ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮಕ್ಕೆ :-ಬಿ.ಎಸ್.ಸಿ/ಬಿ.ಎಡ್ ವಿದ್ಯಾರ್ಹತೆ ಪಡೆದಿರುವ
ಗಣಿತ ಶಿಕ್ಷಕರು,

(11ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ಕನ್ನಡ ಭಾಷಾ ಶಿಕ್ಷಕರು
ವಿದ್ಯಾರ್ಹತೆ:-ಎಂ.ಎ/ಬಿ.ಎಡ್,

ಜೀವಶಾಸ್ತ್ರ ಶಿಕ್ಷಕರು
ವಿದ್ಯಾರ್ಹತೆ:- ಎಂ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

2.ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿ,
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ
(6 ರಿಂದ 10ನೇ ತರಗತಿ- ರಾಜ್ಯ ಪಠ್ಯಕ್ರಮ)
ವಿಜ್ಞಾನ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್,

(11 ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Physics & Mathematics)

ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Chemistry & Biology) ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

3.ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾ||
ಆಂಗ್ಲ ಭಾಷಾ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

4.ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾ||
ಗಣಿತ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25/08/2023, ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು
ಪ್ರಾಂಶುಪಾಲರು, ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ದೂರವಾಣಿ ಸಂಖ್ಯೆ
9632933397,
8660971267,
8310397004,

ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವನಾಯಕನಹಳ್ಳಿ, ದೇವನಹಳ್ಳಿ ತಾ||
9742998287,
9900945262,

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ಗ್ರಾಮ, ನೆಲಮಂಗಲ ತಾಲ್ಲೂಕು.
8317403213,
8660197516

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು.
9739706158,
9986874875,

ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ 080-29787455 ಅನ್ನು ಸಂಪರ್ಕಿಸಬಹುದು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

6 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

13 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

16 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

16 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago