ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅರ್ಹ ಅತಿಥಿ ಶಿಕ್ಷಕರನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಪಡೆಯಲು ಉದ್ದೇಶಿಸಿರುವುದರಿಂದ ಸ್ಥಳೀಯ ಅರ್ಹ ಅತಿಥಿ ಶಿಕ್ಷಕರು ತಮ್ಮ ಸ್ವವಿವರಗಳಿರುವ (biodata, resume) ಮನವಿಗಳನ್ನು ಅವಶ್ಯ ದಾಖಲೆಗಳೊಂದಿಗೆ ಈ ಕೆಳಕಂಡ ಕಚೇರಿಗೆ/ಶಾಲೆಗೆ ಸಲ್ಲಿಸುವುದು.

1.ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮಕ್ಕೆ :-ಬಿ.ಎಸ್.ಸಿ/ಬಿ.ಎಡ್ ವಿದ್ಯಾರ್ಹತೆ ಪಡೆದಿರುವ
ಗಣಿತ ಶಿಕ್ಷಕರು,

(11ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ಕನ್ನಡ ಭಾಷಾ ಶಿಕ್ಷಕರು
ವಿದ್ಯಾರ್ಹತೆ:-ಎಂ.ಎ/ಬಿ.ಎಡ್,

ಜೀವಶಾಸ್ತ್ರ ಶಿಕ್ಷಕರು
ವಿದ್ಯಾರ್ಹತೆ:- ಎಂ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

2.ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿ,
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ
(6 ರಿಂದ 10ನೇ ತರಗತಿ- ರಾಜ್ಯ ಪಠ್ಯಕ್ರಮ)
ವಿಜ್ಞಾನ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್,

(11 ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Physics & Mathematics)

ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Chemistry & Biology) ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

3.ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾ||
ಆಂಗ್ಲ ಭಾಷಾ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

4.ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾ||
ಗಣಿತ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25/08/2023, ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು
ಪ್ರಾಂಶುಪಾಲರು, ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ದೂರವಾಣಿ ಸಂಖ್ಯೆ
9632933397,
8660971267,
8310397004,

ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವನಾಯಕನಹಳ್ಳಿ, ದೇವನಹಳ್ಳಿ ತಾ||
9742998287,
9900945262,

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ಗ್ರಾಮ, ನೆಲಮಂಗಲ ತಾಲ್ಲೂಕು.
8317403213,
8660197516

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು.
9739706158,
9986874875,

ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ 080-29787455 ಅನ್ನು ಸಂಪರ್ಕಿಸಬಹುದು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

9 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

9 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

12 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago