ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅರ್ಹ ಅತಿಥಿ ಶಿಕ್ಷಕರನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಪಡೆಯಲು ಉದ್ದೇಶಿಸಿರುವುದರಿಂದ ಸ್ಥಳೀಯ ಅರ್ಹ ಅತಿಥಿ ಶಿಕ್ಷಕರು ತಮ್ಮ ಸ್ವವಿವರಗಳಿರುವ (biodata, resume) ಮನವಿಗಳನ್ನು ಅವಶ್ಯ ದಾಖಲೆಗಳೊಂದಿಗೆ ಈ ಕೆಳಕಂಡ ಕಚೇರಿಗೆ/ಶಾಲೆಗೆ ಸಲ್ಲಿಸುವುದು.

1.ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮಕ್ಕೆ :-ಬಿ.ಎಸ್.ಸಿ/ಬಿ.ಎಡ್ ವಿದ್ಯಾರ್ಹತೆ ಪಡೆದಿರುವ
ಗಣಿತ ಶಿಕ್ಷಕರು,

(11ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ಕನ್ನಡ ಭಾಷಾ ಶಿಕ್ಷಕರು
ವಿದ್ಯಾರ್ಹತೆ:-ಎಂ.ಎ/ಬಿ.ಎಡ್,

ಜೀವಶಾಸ್ತ್ರ ಶಿಕ್ಷಕರು
ವಿದ್ಯಾರ್ಹತೆ:- ಎಂ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

2.ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿ,
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ
(6 ರಿಂದ 10ನೇ ತರಗತಿ- ರಾಜ್ಯ ಪಠ್ಯಕ್ರಮ)
ವಿಜ್ಞಾನ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್,

(11 ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Physics & Mathematics)

ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Chemistry & Biology) ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

3.ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾ||
ಆಂಗ್ಲ ಭಾಷಾ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

4.ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾ||
ಗಣಿತ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25/08/2023, ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು
ಪ್ರಾಂಶುಪಾಲರು, ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ದೂರವಾಣಿ ಸಂಖ್ಯೆ
9632933397,
8660971267,
8310397004,

ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವನಾಯಕನಹಳ್ಳಿ, ದೇವನಹಳ್ಳಿ ತಾ||
9742998287,
9900945262,

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ಗ್ರಾಮ, ನೆಲಮಂಗಲ ತಾಲ್ಲೂಕು.
8317403213,
8660197516

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು.
9739706158,
9986874875,

ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ 080-29787455 ಅನ್ನು ಸಂಪರ್ಕಿಸಬಹುದು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago