2025-26ನೇ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 36 ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.
ಅತಿಥಿ ಶಿಕ್ಷಕ ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗೆ ಬಿಎ, ಬಿಎಸ್ಸಿ, ಬಿ.ಎಸ್.ಸಿ, ಬಿ.ಸಿ.ಎ ಮತ್ತು ಎಂ.ಎ, ಎಂ.ಎಸ್.ಸಿ ಹಾಗೂ ಬಿ.ಎಡ್ ಸೇರಿ ಸಂಬಂಧಪಟ್ಟ ವಿಷಯವಾರು ವಿದ್ಯಾರ್ಹತೆ ಹೊಂದಿರಬೇಕು.
ಹುದ್ದೆಗಳು ಖಾಲಿಯಿರುವ ಶಾಲೆಗಳ ಪಟ್ಟಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ,(1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, (1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ವಿಜಯಪುರ,ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾಲ್ಲೂಕು.
ಮೇಲ್ಕಂಡ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣವಾದ https://dom.karnataka.gov.in ಅಥವಾ ನೇರವಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ:216, 2ನೇ ಮಹಡಿ ಜಿಲ್ಲಾಡಳಿತ ಭವನದಲ್ಲಿ ತಮ್ಮ ದಾಖಲೆಗಳೊಂದಿಗೆ ಕೊನೆಯ ದಿನಾಂಕ ಮೇ 19 ರ ಒಳಗಾಗಿ ಕಚೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ,ದೂರವಾಣಿ ಸಂಖ್ಯೆ:080-29787455 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ
ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…