ಅತಿಥಿ ಶಿಕ್ಷಕ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

2025-26ನೇ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 36 ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಅತಿಥಿ ಶಿಕ್ಷಕ ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗೆ ಬಿಎ, ಬಿಎಸ್ಸಿ, ಬಿ.ಎಸ್.ಸಿ, ಬಿ.ಸಿ.ಎ ಮತ್ತು ಎಂ.ಎ, ಎಂ.ಎಸ್.ಸಿ ಹಾಗೂ ಬಿ.ಎಡ್ ಸೇರಿ ಸಂಬಂಧಪಟ್ಟ ವಿಷಯವಾರು ವಿದ್ಯಾರ್ಹತೆ ಹೊಂದಿರಬೇಕು.

ಹುದ್ದೆಗಳು ಖಾಲಿಯಿರುವ ಶಾಲೆಗಳ ಪಟ್ಟಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ,(1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, (1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ವಿಜಯಪುರ,ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾಲ್ಲೂಕು.

ಮೇಲ್ಕಂಡ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣವಾದ https://dom.karnataka.gov.in ಅಥವಾ ನೇರವಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ:216, 2ನೇ ಮಹಡಿ ಜಿಲ್ಲಾಡಳಿತ ಭವನದಲ್ಲಿ ತಮ್ಮ ದಾಖಲೆಗಳೊಂದಿಗೆ ಕೊನೆಯ ದಿನಾಂಕ ಮೇ 19 ರ ಒಳಗಾಗಿ ಕಚೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ,ದೂರವಾಣಿ ಸಂಖ್ಯೆ:080-29787455 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ
ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

11 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

13 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

19 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

19 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

2 days ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 days ago