ಅತಿಥಿ ಶಿಕ್ಷಕ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

2025-26ನೇ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 36 ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಅತಿಥಿ ಶಿಕ್ಷಕ ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗೆ ಬಿಎ, ಬಿಎಸ್ಸಿ, ಬಿ.ಎಸ್.ಸಿ, ಬಿ.ಸಿ.ಎ ಮತ್ತು ಎಂ.ಎ, ಎಂ.ಎಸ್.ಸಿ ಹಾಗೂ ಬಿ.ಎಡ್ ಸೇರಿ ಸಂಬಂಧಪಟ್ಟ ವಿಷಯವಾರು ವಿದ್ಯಾರ್ಹತೆ ಹೊಂದಿರಬೇಕು.

ಹುದ್ದೆಗಳು ಖಾಲಿಯಿರುವ ಶಾಲೆಗಳ ಪಟ್ಟಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ,(1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, (1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ವಿಜಯಪುರ,ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾಲ್ಲೂಕು.

ಮೇಲ್ಕಂಡ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣವಾದ https://dom.karnataka.gov.in ಅಥವಾ ನೇರವಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ:216, 2ನೇ ಮಹಡಿ ಜಿಲ್ಲಾಡಳಿತ ಭವನದಲ್ಲಿ ತಮ್ಮ ದಾಖಲೆಗಳೊಂದಿಗೆ ಕೊನೆಯ ದಿನಾಂಕ ಮೇ 19 ರ ಒಳಗಾಗಿ ಕಚೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ,ದೂರವಾಣಿ ಸಂಖ್ಯೆ:080-29787455 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ
ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago