ವಿಶ್ವ ಪರಿಸರ ದಿನದ ಅಂಗವಾಗಿ ಯಲಹಂಕದ ರೇವಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಡಾ.ಶಿಲ್ಪ ಸಮನ್ವಯ ಸಂಸ್ಥೆ ವತಿಯಿಂದ ಅತಿಯಾದ ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕಬಳ್ಳಾಪುರ ಎ.ಎಸ್.ಪಿ ರಾಜ ಇಮಾಮ್ ಖಾಸೀಮ್, ಇತ್ತೀಚೆಗೆ ಮಕ್ಕಳಿಂದ ದೊಡ್ಡವರವರೆಗೂ ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಗೆ ದಾಸರಾಗಿ ತಮ್ಮ ವೈಯುಕ್ತಿಕ ಮಾಹಿತಿಗಳನ್ನೂ ಬಿಡದೆ ಹಂಚಿಕೊಳ್ಳುತ್ತಾರೆ. ಕೆಲ ಕಿಡೀಗೇಡಿಗಳು ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಅವಶ್ಯಕತೆ ಇದ್ದಾಗ ಮಾತ್ರ ಮೊಬೈಲ್ ಬಳಕೆ ಮಾಡಬೇಕು ಎಂದು ತಿಳಿಸಿದರು.
ಶಿಲ್ಪ ಸಮನ್ವಯಿ ಸಂಸ್ಥೆಯ ಅದ್ಯಕ್ಷ ಡಾ.ಶಿಲ್ಪಾ ನವೀನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ಮಾನಸಿಕ ಮತ್ತು ದೈಹಿಕ ರೋಗಗಳು ಹೆಚ್ಚುತ್ತಿದೆ. ಜೊತೆಗೆ, ಮಕ್ಕಳ ಮೆದುಳಿನ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದ್ದು, ಮಾನಸಿಕ ಸ್ಥೀಮಿತತೆ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಮುಂದಿನ ಪೀಳಿಗೆಗೆ ಅತಿಯಾದ ಮೊಬೈಲ್ ಫೋನ್ ಬಳಕೆಯಿಂದಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲು ನಾವು ನಮ್ಮ ಸಂಸ್ಥೆ ಸದಾ ಸಿದ್ಧರಾಗಿರುತ್ತೇವೆ. ಎಲ್ಲರೂ ಅವಶ್ಯಕತೆ ಇದ್ದಾಗ ಮಾತ್ರ ಮೊಬೈಲ್ ಬಳಕೆ ಮಾಡಿ ಎಂದು ಮನವಿ ಮಾಡಿದರು.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…