ವಿಶ್ವ ಪರಿಸರ ದಿನದ ಅಂಗವಾಗಿ ಯಲಹಂಕದ ರೇವಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಡಾ.ಶಿಲ್ಪ ಸಮನ್ವಯ ಸಂಸ್ಥೆ ವತಿಯಿಂದ ಅತಿಯಾದ ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕಬಳ್ಳಾಪುರ ಎ.ಎಸ್.ಪಿ ರಾಜ ಇಮಾಮ್ ಖಾಸೀಮ್, ಇತ್ತೀಚೆಗೆ ಮಕ್ಕಳಿಂದ ದೊಡ್ಡವರವರೆಗೂ ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಗೆ ದಾಸರಾಗಿ ತಮ್ಮ ವೈಯುಕ್ತಿಕ ಮಾಹಿತಿಗಳನ್ನೂ ಬಿಡದೆ ಹಂಚಿಕೊಳ್ಳುತ್ತಾರೆ. ಕೆಲ ಕಿಡೀಗೇಡಿಗಳು ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಅವಶ್ಯಕತೆ ಇದ್ದಾಗ ಮಾತ್ರ ಮೊಬೈಲ್ ಬಳಕೆ ಮಾಡಬೇಕು ಎಂದು ತಿಳಿಸಿದರು.
ಶಿಲ್ಪ ಸಮನ್ವಯಿ ಸಂಸ್ಥೆಯ ಅದ್ಯಕ್ಷ ಡಾ.ಶಿಲ್ಪಾ ನವೀನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ಮಾನಸಿಕ ಮತ್ತು ದೈಹಿಕ ರೋಗಗಳು ಹೆಚ್ಚುತ್ತಿದೆ. ಜೊತೆಗೆ, ಮಕ್ಕಳ ಮೆದುಳಿನ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದ್ದು, ಮಾನಸಿಕ ಸ್ಥೀಮಿತತೆ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಮುಂದಿನ ಪೀಳಿಗೆಗೆ ಅತಿಯಾದ ಮೊಬೈಲ್ ಫೋನ್ ಬಳಕೆಯಿಂದಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲು ನಾವು ನಮ್ಮ ಸಂಸ್ಥೆ ಸದಾ ಸಿದ್ಧರಾಗಿರುತ್ತೇವೆ. ಎಲ್ಲರೂ ಅವಶ್ಯಕತೆ ಇದ್ದಾಗ ಮಾತ್ರ ಮೊಬೈಲ್ ಬಳಕೆ ಮಾಡಿ ಎಂದು ಮನವಿ ಮಾಡಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…