ವಿಶ್ವ ಪರಿಸರ ದಿನದ ಅಂಗವಾಗಿ ಯಲಹಂಕದ ರೇವಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಡಾ.ಶಿಲ್ಪ ಸಮನ್ವಯ ಸಂಸ್ಥೆ ವತಿಯಿಂದ ಅತಿಯಾದ ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕಬಳ್ಳಾಪುರ ಎ.ಎಸ್.ಪಿ ರಾಜ ಇಮಾಮ್ ಖಾಸೀಮ್, ಇತ್ತೀಚೆಗೆ ಮಕ್ಕಳಿಂದ ದೊಡ್ಡವರವರೆಗೂ ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಗೆ ದಾಸರಾಗಿ ತಮ್ಮ ವೈಯುಕ್ತಿಕ ಮಾಹಿತಿಗಳನ್ನೂ ಬಿಡದೆ ಹಂಚಿಕೊಳ್ಳುತ್ತಾರೆ. ಕೆಲ ಕಿಡೀಗೇಡಿಗಳು ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಅವಶ್ಯಕತೆ ಇದ್ದಾಗ ಮಾತ್ರ ಮೊಬೈಲ್ ಬಳಕೆ ಮಾಡಬೇಕು ಎಂದು ತಿಳಿಸಿದರು.
ಶಿಲ್ಪ ಸಮನ್ವಯಿ ಸಂಸ್ಥೆಯ ಅದ್ಯಕ್ಷ ಡಾ.ಶಿಲ್ಪಾ ನವೀನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ಮಾನಸಿಕ ಮತ್ತು ದೈಹಿಕ ರೋಗಗಳು ಹೆಚ್ಚುತ್ತಿದೆ. ಜೊತೆಗೆ, ಮಕ್ಕಳ ಮೆದುಳಿನ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದ್ದು, ಮಾನಸಿಕ ಸ್ಥೀಮಿತತೆ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಮುಂದಿನ ಪೀಳಿಗೆಗೆ ಅತಿಯಾದ ಮೊಬೈಲ್ ಫೋನ್ ಬಳಕೆಯಿಂದಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲು ನಾವು ನಮ್ಮ ಸಂಸ್ಥೆ ಸದಾ ಸಿದ್ಧರಾಗಿರುತ್ತೇವೆ. ಎಲ್ಲರೂ ಅವಶ್ಯಕತೆ ಇದ್ದಾಗ ಮಾತ್ರ ಮೊಬೈಲ್ ಬಳಕೆ ಮಾಡಿ ಎಂದು ಮನವಿ ಮಾಡಿದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…