ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ ತಮಗೆ ಜವಾಬ್ದಾರಿ ನೀಡಿರುವ ಜಿಲ್ಲೆಗಳಿಗೆ ತಕ್ಷಣವೇ ಪ್ರವಾಸ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಸಚಿವರು ತಮ್ಮ ವ್ಯಾಪ್ತಿಯ ಪ್ರತಿಯೊಂದು ತಾಲ್ಲೂಕಿಗೆ ಭೇಟಿ ನೀಡಿ, ಸ್ಥಳೀಯ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಬೇಕು. ಅಲ್ಲದೆ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ವಾಸ್ತವ ಸ್ಥಿತಿಯ ಸಮಗ್ರ ವರದಿಯನ್ನು ಕೂಡಲೇ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಸಲ್ಲಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರ ಜನರೊಂದಿಗೆ ನಿಲ್ಲಲಿದ್ದು, ಅತಿವೃಷ್ಟಿ ಹಾಗೂ ಬರದಿಂದ ಸಂಕಷ್ಟಕ್ಕೊಳಗಾದವರಿಗೆ ಅಗತ್ಯವಿರುವ ಎಲ್ಲ ತುರ್ತು ನೆರವು ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಪರಿಸ್ಥಿತಿಯ ನೈಜ ಚಿತ್ರಣ ಪಡೆಯುವ ಉದ್ದೇಶದಿಂದ ಸಚಿವರ ಪ್ರವಾಸಕ್ಕೆ ಆದ್ಯತೆ ನೀಡಲಾಗಿದ್ದು, ವರದಿಗಳ ಆಧಾರದ ಮೇಲೆ ಮುಂದಿನ ಪರಿಹಾರ ಹಾಗೂ ಪುನರ್ವಸತಿ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಿಳಿಸಲಾಗಿದೆ.

 ಸಚಿವರಿಗೆ ಹೊಣೆಗಾರಿಕೆ ನೀಡಿರುವ ಜಿಲ್ಲೆ

1 ಡಾ. ಜಿ. ಪರಮೇಶ್ವರ- ತುಮಕೂರು

2 ರಘುಮೂರ್ತಿ- ಚಿತ್ರದುರ್ಗ

3 ಬಿ.ಎಸ್. ಸುರೇಶ್- ಚಿಕ್ಕಬಳ್ಳಾಪುರ

4 ಕೆ.ಹೆಚ್. ಮುನಿಯಪ್ಪ- ಬೆಂಗಳೂರು ಗ್ರಾಮಾಂತರ

5 ರಾಮಲಿಂಗಾ ರೆಡ್ಡಿ- ಕೋಲಾರ

6 ಹೆಚ್.ಸಿ. ಬಾಲಕೃಷ್ಣ- ಬೆಂಗಳೂರು ದಕ್ಷಿಣ

7 ಬಿ.ಜೆಡ್. ಜಮೀರ್ ಅಹ್ಮದ್ ಖಾನ್- ವಿಜಯನಗರ

8 ಕೆ.ಜೆ. ಜಾರ್ಜ್- ಚಿಕ್ಕಮಗಳೂರು

9 ಕೆ.ಎಂ. ಶಿವಲಿಂಗೇಗೌಡ- ಹಾಸನ

10 ಮಧು ಬಂಗಾರಪ್ಪ- ಶಿವಮೊಗ್ಗ

11 ಎಂ.ಬಿ. ಪಾಟೀಲ್-  ವಿಜಯಪುರ

12 ವಿಜಯಾನಂದ ಕಾಶಪ್ಪನವರ- ಬಾಗಲಕೋಟೆ

13 ಬಸವರಾಜ ರಾಯರೆಡ್ಡಿ- ಗದಗ

14 ಎಸ್.ಎಸ್. ಮಲ್ಲಿಕಾರ್ಜುನ- ದಾವಣಗೆರೆ

15 ರುದ್ರಪ್ಪ ಲಮಾಣಿ- ಹಾವೇರಿ

16 ಸತೀಶ್ ಜಾರಕಿಹೊಳಿ- ಬೆಳಗಾವಿ

17 ಸಂತೋಷ್ ಲಾಡ್- ಧಾರವಾಡ

18 ಲಕ್ಷ್ಮಣ ಸವದಿ- ಉತ್ತರ ಕನ್ನಡ

19 ಪ್ರಿಯಾಂಕ್ ಖರ್ಗೆ- ಕಲಬುರಗಿ

20 ಅಜಯ್ ಧರ್ಮಸಿಂಗ್- ರಾಯಚೂರು

21 ಈಶ್ವರ್ ಖಂಡ್ರೆ- ಬೀದರ್

22 ಯು.ಟಿ. ಖಾದರ್- ದಕ್ಷಿಣ ಕನ್ನಡ ಹಾಗೂ ಉಡುಪಿ

23 ಪಿ.ಎಂ. ನರೇಂದ್ರಸ್ವಾಮಿ- ಕೊಡಗು

24 ಯತೀಂದ್ರ ಸಿದ್ದರಾಮಯ್ಯ- ಮೈಸೂರು

25 ಚೆಲುವರಾಯಸ್ವಾಮಿ- ಮಂಡ್ಯ

26 ಪುಟ್ಟರಂಗಶೆಟ್ಟಿ- ಚಾಮರಾಜನಗರ

27 ಬಿ. ನಾಗೇಂದ್ರ- ಬಳ್ಳಾರಿ

28 ಶರಣ ಪ್ರಕಾಶ ಪಾಟೀಲ- ಯಾದಗಿರಿ

29 ಶಿವರಾಜ ಸಂಗಪ್ಪ ತಂಗಡಗಿ- ಕೊಪ್ಪಳ

30 ಕೃಷ್ಣ ಭೈರೇಗೌಡ- ಬೆಂಗಳೂರು ನಗರ

Ramesh Babu

Journalist

Recent Posts

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 hours ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

18 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago