ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ ತಮಗೆ ಜವಾಬ್ದಾರಿ ನೀಡಿರುವ ಜಿಲ್ಲೆಗಳಿಗೆ ತಕ್ಷಣವೇ ಪ್ರವಾಸ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಸಚಿವರು ತಮ್ಮ ವ್ಯಾಪ್ತಿಯ ಪ್ರತಿಯೊಂದು ತಾಲ್ಲೂಕಿಗೆ ಭೇಟಿ ನೀಡಿ, ಸ್ಥಳೀಯ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಬೇಕು. ಅಲ್ಲದೆ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ವಾಸ್ತವ ಸ್ಥಿತಿಯ ಸಮಗ್ರ ವರದಿಯನ್ನು ಕೂಡಲೇ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಸಲ್ಲಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರ ಜನರೊಂದಿಗೆ ನಿಲ್ಲಲಿದ್ದು, ಅತಿವೃಷ್ಟಿ ಹಾಗೂ ಬರದಿಂದ ಸಂಕಷ್ಟಕ್ಕೊಳಗಾದವರಿಗೆ ಅಗತ್ಯವಿರುವ ಎಲ್ಲ ತುರ್ತು ನೆರವು ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಪರಿಸ್ಥಿತಿಯ ನೈಜ ಚಿತ್ರಣ ಪಡೆಯುವ ಉದ್ದೇಶದಿಂದ ಸಚಿವರ ಪ್ರವಾಸಕ್ಕೆ ಆದ್ಯತೆ ನೀಡಲಾಗಿದ್ದು, ವರದಿಗಳ ಆಧಾರದ ಮೇಲೆ ಮುಂದಿನ ಪರಿಹಾರ ಹಾಗೂ ಪುನರ್ವಸತಿ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಿಳಿಸಲಾಗಿದೆ.

 ಸಚಿವರಿಗೆ ಹೊಣೆಗಾರಿಕೆ ನೀಡಿರುವ ಜಿಲ್ಲೆ

1 ಡಾ. ಜಿ. ಪರಮೇಶ್ವರ- ತುಮಕೂರು

2 ರಘುಮೂರ್ತಿ- ಚಿತ್ರದುರ್ಗ

3 ಬಿ.ಎಸ್. ಸುರೇಶ್- ಚಿಕ್ಕಬಳ್ಳಾಪುರ

4 ಕೆ.ಹೆಚ್. ಮುನಿಯಪ್ಪ- ಬೆಂಗಳೂರು ಗ್ರಾಮಾಂತರ

5 ರಾಮಲಿಂಗಾ ರೆಡ್ಡಿ- ಕೋಲಾರ

6 ಹೆಚ್.ಸಿ. ಬಾಲಕೃಷ್ಣ- ಬೆಂಗಳೂರು ದಕ್ಷಿಣ

7 ಬಿ.ಜೆಡ್. ಜಮೀರ್ ಅಹ್ಮದ್ ಖಾನ್- ವಿಜಯನಗರ

8 ಕೆ.ಜೆ. ಜಾರ್ಜ್- ಚಿಕ್ಕಮಗಳೂರು

9 ಕೆ.ಎಂ. ಶಿವಲಿಂಗೇಗೌಡ- ಹಾಸನ

10 ಮಧು ಬಂಗಾರಪ್ಪ- ಶಿವಮೊಗ್ಗ

11 ಎಂ.ಬಿ. ಪಾಟೀಲ್-  ವಿಜಯಪುರ

12 ವಿಜಯಾನಂದ ಕಾಶಪ್ಪನವರ- ಬಾಗಲಕೋಟೆ

13 ಬಸವರಾಜ ರಾಯರೆಡ್ಡಿ- ಗದಗ

14 ಎಸ್.ಎಸ್. ಮಲ್ಲಿಕಾರ್ಜುನ- ದಾವಣಗೆರೆ

15 ರುದ್ರಪ್ಪ ಲಮಾಣಿ- ಹಾವೇರಿ

16 ಸತೀಶ್ ಜಾರಕಿಹೊಳಿ- ಬೆಳಗಾವಿ

17 ಸಂತೋಷ್ ಲಾಡ್- ಧಾರವಾಡ

18 ಲಕ್ಷ್ಮಣ ಸವದಿ- ಉತ್ತರ ಕನ್ನಡ

19 ಪ್ರಿಯಾಂಕ್ ಖರ್ಗೆ- ಕಲಬುರಗಿ

20 ಅಜಯ್ ಧರ್ಮಸಿಂಗ್- ರಾಯಚೂರು

21 ಈಶ್ವರ್ ಖಂಡ್ರೆ- ಬೀದರ್

22 ಯು.ಟಿ. ಖಾದರ್- ದಕ್ಷಿಣ ಕನ್ನಡ ಹಾಗೂ ಉಡುಪಿ

23 ಪಿ.ಎಂ. ನರೇಂದ್ರಸ್ವಾಮಿ- ಕೊಡಗು

24 ಯತೀಂದ್ರ ಸಿದ್ದರಾಮಯ್ಯ- ಮೈಸೂರು

25 ಚೆಲುವರಾಯಸ್ವಾಮಿ- ಮಂಡ್ಯ

26 ಪುಟ್ಟರಂಗಶೆಟ್ಟಿ- ಚಾಮರಾಜನಗರ

27 ಬಿ. ನಾಗೇಂದ್ರ- ಬಳ್ಳಾರಿ

28 ಶರಣ ಪ್ರಕಾಶ ಪಾಟೀಲ- ಯಾದಗಿರಿ

29 ಶಿವರಾಜ ಸಂಗಪ್ಪ ತಂಗಡಗಿ- ಕೊಪ್ಪಳ

30 ಕೃಷ್ಣ ಭೈರೇಗೌಡ- ಬೆಂಗಳೂರು ನಗರ

Ramesh Babu

Journalist

Recent Posts

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 hour ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

13 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

14 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

15 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

19 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

1 day ago