ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಆರೋಪ: ತಮ್ಮನೇ  ಅಣ್ಣನ ತಲೆ ಮೇಲೆ ರುಬ್ಬುವ ಕಲ್ಲನ್ನು ಎತ್ತಿಹಾಕಿ ಕೊಲೆ ಶಂಕೆ

ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ತಮ್ಮನಿಂದಲೇ ಅಣ್ಣನ ಕೊಲೆ ಆಗಿರುವ ಘಟನೆ ದೊಡ್ಡಬಳ್ಳಾಪುರದ ದೊಡ್ಡಮಂಕಲಾಳದಲ್ಲಿ ನಡೆದಿದೆ.

ಗಂಗರಾಜು (35) ಕೊಲೆಯಾದ ದುರ್ದೈವಿ. ತಲೆಯ ಮೇಲೆ‌ ಗುಂಡು ಕಲ್ಲು ಹಾಕಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ತಮ್ಮ ರವಿ ಮತ್ತು ಹೆಂಡತಿ ಭಾಗ್ಯಮ್ಮ ಕೊಲೆ ಮಾಡಿರುವ ಶಂಕೆವ್ಯಕ್ತವಾಗಿದೆ.

ಕಳೆದ 5 ವರ್ಷಗಳ ಹಿಂದೆ ಸಹೋದರ ರವಿ ಮೃತ ಗಂಗರಾಜನ ಮಡದಿ ಭಾಗ್ಯಮ್ಮಳೊಂದಿಗೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದು, ಮನೆಬಿಟ್ಟು ಹೋಗಿ ಬೆಂಗಳೂರಿನಲ್ಲಿ ವಾಸವಿದ್ದರು ಎನ್ನಲಾಗಿದೆ. ಹೀಗಾಗಿ ತನ್ನ ಮೂರು ಮಕ್ಕಳನ್ನು ಅನಾಥಾಶ್ರಮಕ್ಕೆ ಗಂಗರಾಜ್ ಬಿಟ್ಟಿದ್ದ. 15 ದಿನಗಳ ಹಿಂದೆ ಹೆಂಡತಿ ಮತ್ತು ತಮ್ಮ ಬಂದಾಗ ಗಂಗರಾಜ್ ಕುಪಿತಗೊಂಡು ಗಲಾಟೆ ಮಾಡಿದ್ದ.

ಅದನ್ನೇ ಮನಸ್ಸಲ್ಲಿ ಇಟ್ಟುಕೊಂಡು ಸೋಮವಾರ ರಾತ್ರಿ ರುಬ್ಬುವ ಕಲ್ಲನ್ನು ತಲೆಯ ಮೇಲೆ ಎತ್ತಿಹಾಕಿ ರವಿ ಹಾಗೂ ಭಾಗ್ಯಮ್ಮ ಅಣ್ಣನಾದ ಗಂಗರಾಜ ಕೊಲೆ ಮಾಡಿದ್ದಾರೆಂದು ಆರೋಪಿಸಿ ಮೃತನ ತಾಯಿ ಜಯಮ್ಮ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡಿರುವ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎಂ.ಆರ್.ಹರೀಶ್ ತನಿಖೆ ಆರಂಭಿಸಿದ್ದು, ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 hour ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

7 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago