ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ತಮ್ಮನಿಂದಲೇ ಅಣ್ಣನ ಕೊಲೆ ಆಗಿರುವ ಘಟನೆ ದೊಡ್ಡಬಳ್ಳಾಪುರದ ದೊಡ್ಡಮಂಕಲಾಳದಲ್ಲಿ ನಡೆದಿದೆ.
ಗಂಗರಾಜು (35) ಕೊಲೆಯಾದ ದುರ್ದೈವಿ. ತಲೆಯ ಮೇಲೆ ಗುಂಡು ಕಲ್ಲು ಹಾಕಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ತಮ್ಮ ರವಿ ಮತ್ತು ಹೆಂಡತಿ ಭಾಗ್ಯಮ್ಮ ಕೊಲೆ ಮಾಡಿರುವ ಶಂಕೆವ್ಯಕ್ತವಾಗಿದೆ.
ಕಳೆದ 5 ವರ್ಷಗಳ ಹಿಂದೆ ಸಹೋದರ ರವಿ ಮೃತ ಗಂಗರಾಜನ ಮಡದಿ ಭಾಗ್ಯಮ್ಮಳೊಂದಿಗೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದು, ಮನೆಬಿಟ್ಟು ಹೋಗಿ ಬೆಂಗಳೂರಿನಲ್ಲಿ ವಾಸವಿದ್ದರು ಎನ್ನಲಾಗಿದೆ. ಹೀಗಾಗಿ ತನ್ನ ಮೂರು ಮಕ್ಕಳನ್ನು ಅನಾಥಾಶ್ರಮಕ್ಕೆ ಗಂಗರಾಜ್ ಬಿಟ್ಟಿದ್ದ. 15 ದಿನಗಳ ಹಿಂದೆ ಹೆಂಡತಿ ಮತ್ತು ತಮ್ಮ ಬಂದಾಗ ಗಂಗರಾಜ್ ಕುಪಿತಗೊಂಡು ಗಲಾಟೆ ಮಾಡಿದ್ದ.
ಅದನ್ನೇ ಮನಸ್ಸಲ್ಲಿ ಇಟ್ಟುಕೊಂಡು ಸೋಮವಾರ ರಾತ್ರಿ ರುಬ್ಬುವ ಕಲ್ಲನ್ನು ತಲೆಯ ಮೇಲೆ ಎತ್ತಿಹಾಕಿ ರವಿ ಹಾಗೂ ಭಾಗ್ಯಮ್ಮ ಅಣ್ಣನಾದ ಗಂಗರಾಜ ಕೊಲೆ ಮಾಡಿದ್ದಾರೆಂದು ಆರೋಪಿಸಿ ಮೃತನ ತಾಯಿ ಜಯಮ್ಮ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡಿರುವ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ.ಆರ್.ಹರೀಶ್ ತನಿಖೆ ಆರಂಭಿಸಿದ್ದು, ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…