ಆನೇಕಲ್ ಬಳಿಯ ಅತ್ತಿಬೆಲೆ ಸಮೀಪ ಸಂಭವಿಸಿರುವ ಪಟಾಕಿ ದುರಂತದಲ್ಲಿ 12 ಮಂದಿ ಜೀವಂತ ದಹನವಾಗಿರುವ ಸುದ್ದಿ ದುಃಖಕರ. ವಿಷಯ ತಿಳಿದ ಕೂಡಲೇ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ದುರಂತದ ಕಾರಣ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ನೋವಿನಲ್ಲಿರುವ ಕುಟುಂಬದ ಜೊತೆ ನಾವಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಅತ್ತಿಬೆಲೆಯಲ್ಲಿ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕರ್ನಾಟಕ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ
ದೀಪಾವಳಿ ಹಬ್ಬಕ್ಕಾಗಿ ಪಟಾಕಿ ಮಾರಾಟಕ್ಕಾಗಿ ಪಟಾಕಿಗಳನ್ನ ತರಲಾಗಿದ್ದು, ಗಾಡಿಯಿಂದ ಪಟಾಕಿಯನ್ನ ಅನ್ ಲೋಡ್ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ, ಬೆಂಕಿಯ ಅವಘಡದಲ್ಲಿ ಒಂದು ಲಾರಿ 2 ಟಾಟಾ ಏಸ್ ಗಾಡಿಗಳು ಮತ್ತು 4 ಬೈಕ್ ಗಳು ಬೆಂಕಿಗಾಹುತಿಯಾಗಿದೆ. ಪಟಾಕಿ ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದು, 13 ಕಾರ್ಮಿಕರ ಶವಗಳು ಸುಟ್ಟುಕರಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ,
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…