‘ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್’ ಮತ್ತು ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್

ಬೆಂಗಳೂರು, ಡಿಸೆಂಬರ್ 18, 2024: ಟ್ರಾವೆಲ್ ಹಾಗೂ ಲೀಶರ್ ಇಂಡಿಯಾ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಅತ್ಯುತ್ತಮ ದೇಶೀಯ ಏರ್‌ಪೋರ್ಟ್ ಲಾಂಜ್’ ಮನ್ನಣೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ ಪಡೆದುಕೊಂಡಿದೆ.

ಇದಲ್ಲದೆ, ಕಾಂಡೆ ನಾಸ್ಟ್ ರೀಡರ್ಸ್ ಚಾಯ್ಸ್ ಅವಾರ್ಡ್ಸ್‌ -2024 ನಲ್ಲಿ ಟರ್ಮಿನಲ್ 2 ನಲ್ಲಿನ ಅಂತಾರಾಷ್ಟ್ರೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ಗೆ ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಎಂಬ ಶೀರ್ಷಿಕೆಯ ಮನ್ನಣೆಯನ್ನು ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ವಿಶ್ವದರ್ಜೆಯ ಪ್ರಯಾಣದ ಅನುಭವ, ಸೌಕರ್ಯ, ಸೌಲಭ್ಯ ಮತ್ತು ಅಸಾಧಾರಣ ಸೇವೆ ನೀಡುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬದ್ದತೆಯನ್ನು ಎತ್ತಿಹಿಡಿಯುತ್ತದೆ.

ಪ್ರತಿಷ್ಠಿತ ಟ್ರಾವೆಲ್ + ಲೀಶರ್ ಮತ್ತು ಕಾಂಡೆ ನಾಸ್ಟ್ ಟ್ರಾವೆಲರ್ ನಿಯತಕಾಲಿಕೆಗಳು ಪ್ರಯಾಣ ಮತ್ತು ಆತಿಥ್ಯ ಉದ್ಯಮದಲ್ಲಿನ ಅತ್ಯುತ್ತಮ ಸಂಸ್ಥೆಗಳನ್ನು ಓದುಗರ ಆಯ್ಕೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡುತ್ತವೆ. ಈ ಪುರಸ್ಕಾರಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್ ಬಗ್ಗೆ ಪ್ರಯಾಣಿಕರು ಹೊಂದಿರುವ ನಂಬಿಕೆ ಮತ್ತು ಮೆಚ್ಚುಗೆಯ ಪ್ರತಿರೂಪವಾಗಿದೆ.

ಈ ಕುರಿತು ಮಾತನಾಡಿದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರಿ ಮರಾರ್, “ಕಾಂಡೆ ನಾಸ್ಟ್ ಟ್ರಾವೆಲರ್ ಮತ್ತು ಟ್ರಾವೆಲ್ + ಲೀಶರ್ ವತಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2 ರ ಲಾಂಜ್‌ಗೆ ಸಿಕ್ಕಿರುವ ಈ ಮನ್ನಣೆ ಪ್ರಶಂಸನೀಯ, ಪ್ರಯಾಣಿಕರಿಗೆ ಮೊದಲ ಆದ್ಯತೆಯಲ್ಲಿ ಉತ್ತಮ ಸೌಕರ್ಯ ಹಾಗೂ ವ್ಯವಸ್ಥೆಯೊಂದಿಗೆ ನಿರ್ಮಾಣವಾಗಿರುವ ಲಾಂಜ್‌ನ್ನು ಇನ್ನಷ್ಟು ಪ್ರಯಾಣಿಕರ ಸ್ನೇಹಿಯಂತೆ ಕಾರ್ಯನಿರ್ವಹಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅನುಭವವನ್ನು ಇನ್ನಷ್ಟು ಉನ್ನತೀಕರಿಸಲು ಹಾಗೂ ಆತಿಥ್ಯದ ಹೊಸ ಮಾನದಂಡವನ್ನು ಹೆಚ್ಚಿಸಲು ನಮಗೆ ಪ್ರೇರಣೆ ನೀಡಿದಂತಾಗಿದೆ” ಎಂದರು.

ಟರ್ಮಿನಲ್‌ 2 ಆರಂಭಗೊಂಡ ಬಳಿಕ ನೀಡುತ್ತಿರುವ ಸೇವೆಗೆ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಪ್ರಶಸ್ತಿಗಳ ಮನ್ನಣೆ ದೊರೆಯುತ್ತಾ ಬಂದಿದ್ದು, ಇದು ವಿಮಾನ ನಿಲ್ದಾಣದ ಸೇವಾ ಉತ್ಕೃಷ್ಟತೆಯ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಟರ್ಮಿನಲ್‌ 2 ಲಾಂಜ್‌ ತನ್ನ ವಿಶ್ವ ದರ್ಜೆಯ ವಿನ್ಯಾಸ, ಉನ್ನತ ಆತಿಥ್ಯ ಮತ್ತು ಆಧುನಿಕ ಐಷಾರಾಮಿ ಸೌಕರ್ಯದೊಂದಿಗೆ ಸ್ಥಳೀಯ ಸಂಸ್ಕೃತಿಯ ಅನನ್ಯ ಸಮ್ಮಿಲನದಿಂದ ಕೂಡಿದೆ. ಟರ್ಮಿನಲ್‌ 2 ನಲ್ಲಿನ 080 ಲಾಂಜ್‌ಗಳು ಬೆಂಗಳೂರಿನ ಹೆಮ್ಮೆಯ ಸಂಸ್ಕೃತಿ ಮತ್ತು ಹಸಿರು ಪರಿಸರದಿಂದ ಪ್ರೇರಿತವಾದ ನವೀನ ವಿನ್ಯಾಸಕ್ಕೆ ಹೆಸರುವಾಸಿಯಾಗಿದೆ. ವೈವಿಧ್ಯಮಯ ತಿಂಡಿ ತಿನಿಸುಗಳ ಆಯ್ಕೆ, ವರ್ಕ್‌ಸ್ಟೇಷನ್‌, ಹೈ-ಸ್ಪೀಡ್ ವೈ-ಫೈ ಮತ್ತು ಪ್ರೀಮಿಯಂ ಆತಿಥ್ಯ ಸೇವೆಗಳು ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಪ್ರಯಾಣಿಕರಿಗೆ ವಿಶ್ರಾಂತಿಯ ಅನುಭವವನ್ನು ನೀಡುತ್ತಿದೆ.

Ramesh Babu

Journalist

Recent Posts

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

2 hours ago

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

5 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

17 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

17 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

18 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

20 hours ago