‘ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್’ ಮತ್ತು ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್

ಬೆಂಗಳೂರು, ಡಿಸೆಂಬರ್ 18, 2024: ಟ್ರಾವೆಲ್ ಹಾಗೂ ಲೀಶರ್ ಇಂಡಿಯಾ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಅತ್ಯುತ್ತಮ ದೇಶೀಯ ಏರ್‌ಪೋರ್ಟ್ ಲಾಂಜ್’ ಮನ್ನಣೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ ಪಡೆದುಕೊಂಡಿದೆ.

ಇದಲ್ಲದೆ, ಕಾಂಡೆ ನಾಸ್ಟ್ ರೀಡರ್ಸ್ ಚಾಯ್ಸ್ ಅವಾರ್ಡ್ಸ್‌ -2024 ನಲ್ಲಿ ಟರ್ಮಿನಲ್ 2 ನಲ್ಲಿನ ಅಂತಾರಾಷ್ಟ್ರೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ಗೆ ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಎಂಬ ಶೀರ್ಷಿಕೆಯ ಮನ್ನಣೆಯನ್ನು ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ವಿಶ್ವದರ್ಜೆಯ ಪ್ರಯಾಣದ ಅನುಭವ, ಸೌಕರ್ಯ, ಸೌಲಭ್ಯ ಮತ್ತು ಅಸಾಧಾರಣ ಸೇವೆ ನೀಡುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬದ್ದತೆಯನ್ನು ಎತ್ತಿಹಿಡಿಯುತ್ತದೆ.

ಪ್ರತಿಷ್ಠಿತ ಟ್ರಾವೆಲ್ + ಲೀಶರ್ ಮತ್ತು ಕಾಂಡೆ ನಾಸ್ಟ್ ಟ್ರಾವೆಲರ್ ನಿಯತಕಾಲಿಕೆಗಳು ಪ್ರಯಾಣ ಮತ್ತು ಆತಿಥ್ಯ ಉದ್ಯಮದಲ್ಲಿನ ಅತ್ಯುತ್ತಮ ಸಂಸ್ಥೆಗಳನ್ನು ಓದುಗರ ಆಯ್ಕೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡುತ್ತವೆ. ಈ ಪುರಸ್ಕಾರಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್ ಬಗ್ಗೆ ಪ್ರಯಾಣಿಕರು ಹೊಂದಿರುವ ನಂಬಿಕೆ ಮತ್ತು ಮೆಚ್ಚುಗೆಯ ಪ್ರತಿರೂಪವಾಗಿದೆ.

ಈ ಕುರಿತು ಮಾತನಾಡಿದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರಿ ಮರಾರ್, “ಕಾಂಡೆ ನಾಸ್ಟ್ ಟ್ರಾವೆಲರ್ ಮತ್ತು ಟ್ರಾವೆಲ್ + ಲೀಶರ್ ವತಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2 ರ ಲಾಂಜ್‌ಗೆ ಸಿಕ್ಕಿರುವ ಈ ಮನ್ನಣೆ ಪ್ರಶಂಸನೀಯ, ಪ್ರಯಾಣಿಕರಿಗೆ ಮೊದಲ ಆದ್ಯತೆಯಲ್ಲಿ ಉತ್ತಮ ಸೌಕರ್ಯ ಹಾಗೂ ವ್ಯವಸ್ಥೆಯೊಂದಿಗೆ ನಿರ್ಮಾಣವಾಗಿರುವ ಲಾಂಜ್‌ನ್ನು ಇನ್ನಷ್ಟು ಪ್ರಯಾಣಿಕರ ಸ್ನೇಹಿಯಂತೆ ಕಾರ್ಯನಿರ್ವಹಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅನುಭವವನ್ನು ಇನ್ನಷ್ಟು ಉನ್ನತೀಕರಿಸಲು ಹಾಗೂ ಆತಿಥ್ಯದ ಹೊಸ ಮಾನದಂಡವನ್ನು ಹೆಚ್ಚಿಸಲು ನಮಗೆ ಪ್ರೇರಣೆ ನೀಡಿದಂತಾಗಿದೆ” ಎಂದರು.

ಟರ್ಮಿನಲ್‌ 2 ಆರಂಭಗೊಂಡ ಬಳಿಕ ನೀಡುತ್ತಿರುವ ಸೇವೆಗೆ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಪ್ರಶಸ್ತಿಗಳ ಮನ್ನಣೆ ದೊರೆಯುತ್ತಾ ಬಂದಿದ್ದು, ಇದು ವಿಮಾನ ನಿಲ್ದಾಣದ ಸೇವಾ ಉತ್ಕೃಷ್ಟತೆಯ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಟರ್ಮಿನಲ್‌ 2 ಲಾಂಜ್‌ ತನ್ನ ವಿಶ್ವ ದರ್ಜೆಯ ವಿನ್ಯಾಸ, ಉನ್ನತ ಆತಿಥ್ಯ ಮತ್ತು ಆಧುನಿಕ ಐಷಾರಾಮಿ ಸೌಕರ್ಯದೊಂದಿಗೆ ಸ್ಥಳೀಯ ಸಂಸ್ಕೃತಿಯ ಅನನ್ಯ ಸಮ್ಮಿಲನದಿಂದ ಕೂಡಿದೆ. ಟರ್ಮಿನಲ್‌ 2 ನಲ್ಲಿನ 080 ಲಾಂಜ್‌ಗಳು ಬೆಂಗಳೂರಿನ ಹೆಮ್ಮೆಯ ಸಂಸ್ಕೃತಿ ಮತ್ತು ಹಸಿರು ಪರಿಸರದಿಂದ ಪ್ರೇರಿತವಾದ ನವೀನ ವಿನ್ಯಾಸಕ್ಕೆ ಹೆಸರುವಾಸಿಯಾಗಿದೆ. ವೈವಿಧ್ಯಮಯ ತಿಂಡಿ ತಿನಿಸುಗಳ ಆಯ್ಕೆ, ವರ್ಕ್‌ಸ್ಟೇಷನ್‌, ಹೈ-ಸ್ಪೀಡ್ ವೈ-ಫೈ ಮತ್ತು ಪ್ರೀಮಿಯಂ ಆತಿಥ್ಯ ಸೇವೆಗಳು ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಪ್ರಯಾಣಿಕರಿಗೆ ವಿಶ್ರಾಂತಿಯ ಅನುಭವವನ್ನು ನೀಡುತ್ತಿದೆ.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

10 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

19 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

21 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

23 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

2 days ago