‘ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್’ ಮತ್ತು ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್

ಬೆಂಗಳೂರು, ಡಿಸೆಂಬರ್ 18, 2024: ಟ್ರಾವೆಲ್ ಹಾಗೂ ಲೀಶರ್ ಇಂಡಿಯಾ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಅತ್ಯುತ್ತಮ ದೇಶೀಯ ಏರ್‌ಪೋರ್ಟ್ ಲಾಂಜ್’ ಮನ್ನಣೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ ಪಡೆದುಕೊಂಡಿದೆ.

ಇದಲ್ಲದೆ, ಕಾಂಡೆ ನಾಸ್ಟ್ ರೀಡರ್ಸ್ ಚಾಯ್ಸ್ ಅವಾರ್ಡ್ಸ್‌ -2024 ನಲ್ಲಿ ಟರ್ಮಿನಲ್ 2 ನಲ್ಲಿನ ಅಂತಾರಾಷ್ಟ್ರೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ಗೆ ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಎಂಬ ಶೀರ್ಷಿಕೆಯ ಮನ್ನಣೆಯನ್ನು ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ವಿಶ್ವದರ್ಜೆಯ ಪ್ರಯಾಣದ ಅನುಭವ, ಸೌಕರ್ಯ, ಸೌಲಭ್ಯ ಮತ್ತು ಅಸಾಧಾರಣ ಸೇವೆ ನೀಡುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬದ್ದತೆಯನ್ನು ಎತ್ತಿಹಿಡಿಯುತ್ತದೆ.

ಪ್ರತಿಷ್ಠಿತ ಟ್ರಾವೆಲ್ + ಲೀಶರ್ ಮತ್ತು ಕಾಂಡೆ ನಾಸ್ಟ್ ಟ್ರಾವೆಲರ್ ನಿಯತಕಾಲಿಕೆಗಳು ಪ್ರಯಾಣ ಮತ್ತು ಆತಿಥ್ಯ ಉದ್ಯಮದಲ್ಲಿನ ಅತ್ಯುತ್ತಮ ಸಂಸ್ಥೆಗಳನ್ನು ಓದುಗರ ಆಯ್ಕೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡುತ್ತವೆ. ಈ ಪುರಸ್ಕಾರಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್ ಬಗ್ಗೆ ಪ್ರಯಾಣಿಕರು ಹೊಂದಿರುವ ನಂಬಿಕೆ ಮತ್ತು ಮೆಚ್ಚುಗೆಯ ಪ್ರತಿರೂಪವಾಗಿದೆ.

ಈ ಕುರಿತು ಮಾತನಾಡಿದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರಿ ಮರಾರ್, “ಕಾಂಡೆ ನಾಸ್ಟ್ ಟ್ರಾವೆಲರ್ ಮತ್ತು ಟ್ರಾವೆಲ್ + ಲೀಶರ್ ವತಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2 ರ ಲಾಂಜ್‌ಗೆ ಸಿಕ್ಕಿರುವ ಈ ಮನ್ನಣೆ ಪ್ರಶಂಸನೀಯ, ಪ್ರಯಾಣಿಕರಿಗೆ ಮೊದಲ ಆದ್ಯತೆಯಲ್ಲಿ ಉತ್ತಮ ಸೌಕರ್ಯ ಹಾಗೂ ವ್ಯವಸ್ಥೆಯೊಂದಿಗೆ ನಿರ್ಮಾಣವಾಗಿರುವ ಲಾಂಜ್‌ನ್ನು ಇನ್ನಷ್ಟು ಪ್ರಯಾಣಿಕರ ಸ್ನೇಹಿಯಂತೆ ಕಾರ್ಯನಿರ್ವಹಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅನುಭವವನ್ನು ಇನ್ನಷ್ಟು ಉನ್ನತೀಕರಿಸಲು ಹಾಗೂ ಆತಿಥ್ಯದ ಹೊಸ ಮಾನದಂಡವನ್ನು ಹೆಚ್ಚಿಸಲು ನಮಗೆ ಪ್ರೇರಣೆ ನೀಡಿದಂತಾಗಿದೆ” ಎಂದರು.

ಟರ್ಮಿನಲ್‌ 2 ಆರಂಭಗೊಂಡ ಬಳಿಕ ನೀಡುತ್ತಿರುವ ಸೇವೆಗೆ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಪ್ರಶಸ್ತಿಗಳ ಮನ್ನಣೆ ದೊರೆಯುತ್ತಾ ಬಂದಿದ್ದು, ಇದು ವಿಮಾನ ನಿಲ್ದಾಣದ ಸೇವಾ ಉತ್ಕೃಷ್ಟತೆಯ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಟರ್ಮಿನಲ್‌ 2 ಲಾಂಜ್‌ ತನ್ನ ವಿಶ್ವ ದರ್ಜೆಯ ವಿನ್ಯಾಸ, ಉನ್ನತ ಆತಿಥ್ಯ ಮತ್ತು ಆಧುನಿಕ ಐಷಾರಾಮಿ ಸೌಕರ್ಯದೊಂದಿಗೆ ಸ್ಥಳೀಯ ಸಂಸ್ಕೃತಿಯ ಅನನ್ಯ ಸಮ್ಮಿಲನದಿಂದ ಕೂಡಿದೆ. ಟರ್ಮಿನಲ್‌ 2 ನಲ್ಲಿನ 080 ಲಾಂಜ್‌ಗಳು ಬೆಂಗಳೂರಿನ ಹೆಮ್ಮೆಯ ಸಂಸ್ಕೃತಿ ಮತ್ತು ಹಸಿರು ಪರಿಸರದಿಂದ ಪ್ರೇರಿತವಾದ ನವೀನ ವಿನ್ಯಾಸಕ್ಕೆ ಹೆಸರುವಾಸಿಯಾಗಿದೆ. ವೈವಿಧ್ಯಮಯ ತಿಂಡಿ ತಿನಿಸುಗಳ ಆಯ್ಕೆ, ವರ್ಕ್‌ಸ್ಟೇಷನ್‌, ಹೈ-ಸ್ಪೀಡ್ ವೈ-ಫೈ ಮತ್ತು ಪ್ರೀಮಿಯಂ ಆತಿಥ್ಯ ಸೇವೆಗಳು ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಪ್ರಯಾಣಿಕರಿಗೆ ವಿಶ್ರಾಂತಿಯ ಅನುಭವವನ್ನು ನೀಡುತ್ತಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

52 minutes ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago