‘ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್’ ಮತ್ತು ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್

ಬೆಂಗಳೂರು, ಡಿಸೆಂಬರ್ 18, 2024: ಟ್ರಾವೆಲ್ ಹಾಗೂ ಲೀಶರ್ ಇಂಡಿಯಾ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಅತ್ಯುತ್ತಮ ದೇಶೀಯ ಏರ್‌ಪೋರ್ಟ್ ಲಾಂಜ್’ ಮನ್ನಣೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ ಪಡೆದುಕೊಂಡಿದೆ.

ಇದಲ್ಲದೆ, ಕಾಂಡೆ ನಾಸ್ಟ್ ರೀಡರ್ಸ್ ಚಾಯ್ಸ್ ಅವಾರ್ಡ್ಸ್‌ -2024 ನಲ್ಲಿ ಟರ್ಮಿನಲ್ 2 ನಲ್ಲಿನ ಅಂತಾರಾಷ್ಟ್ರೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ಗೆ ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಎಂಬ ಶೀರ್ಷಿಕೆಯ ಮನ್ನಣೆಯನ್ನು ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ವಿಶ್ವದರ್ಜೆಯ ಪ್ರಯಾಣದ ಅನುಭವ, ಸೌಕರ್ಯ, ಸೌಲಭ್ಯ ಮತ್ತು ಅಸಾಧಾರಣ ಸೇವೆ ನೀಡುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬದ್ದತೆಯನ್ನು ಎತ್ತಿಹಿಡಿಯುತ್ತದೆ.

ಪ್ರತಿಷ್ಠಿತ ಟ್ರಾವೆಲ್ + ಲೀಶರ್ ಮತ್ತು ಕಾಂಡೆ ನಾಸ್ಟ್ ಟ್ರಾವೆಲರ್ ನಿಯತಕಾಲಿಕೆಗಳು ಪ್ರಯಾಣ ಮತ್ತು ಆತಿಥ್ಯ ಉದ್ಯಮದಲ್ಲಿನ ಅತ್ಯುತ್ತಮ ಸಂಸ್ಥೆಗಳನ್ನು ಓದುಗರ ಆಯ್ಕೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡುತ್ತವೆ. ಈ ಪುರಸ್ಕಾರಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್ ಬಗ್ಗೆ ಪ್ರಯಾಣಿಕರು ಹೊಂದಿರುವ ನಂಬಿಕೆ ಮತ್ತು ಮೆಚ್ಚುಗೆಯ ಪ್ರತಿರೂಪವಾಗಿದೆ.

ಈ ಕುರಿತು ಮಾತನಾಡಿದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರಿ ಮರಾರ್, “ಕಾಂಡೆ ನಾಸ್ಟ್ ಟ್ರಾವೆಲರ್ ಮತ್ತು ಟ್ರಾವೆಲ್ + ಲೀಶರ್ ವತಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2 ರ ಲಾಂಜ್‌ಗೆ ಸಿಕ್ಕಿರುವ ಈ ಮನ್ನಣೆ ಪ್ರಶಂಸನೀಯ, ಪ್ರಯಾಣಿಕರಿಗೆ ಮೊದಲ ಆದ್ಯತೆಯಲ್ಲಿ ಉತ್ತಮ ಸೌಕರ್ಯ ಹಾಗೂ ವ್ಯವಸ್ಥೆಯೊಂದಿಗೆ ನಿರ್ಮಾಣವಾಗಿರುವ ಲಾಂಜ್‌ನ್ನು ಇನ್ನಷ್ಟು ಪ್ರಯಾಣಿಕರ ಸ್ನೇಹಿಯಂತೆ ಕಾರ್ಯನಿರ್ವಹಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅನುಭವವನ್ನು ಇನ್ನಷ್ಟು ಉನ್ನತೀಕರಿಸಲು ಹಾಗೂ ಆತಿಥ್ಯದ ಹೊಸ ಮಾನದಂಡವನ್ನು ಹೆಚ್ಚಿಸಲು ನಮಗೆ ಪ್ರೇರಣೆ ನೀಡಿದಂತಾಗಿದೆ” ಎಂದರು.

ಟರ್ಮಿನಲ್‌ 2 ಆರಂಭಗೊಂಡ ಬಳಿಕ ನೀಡುತ್ತಿರುವ ಸೇವೆಗೆ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಪ್ರಶಸ್ತಿಗಳ ಮನ್ನಣೆ ದೊರೆಯುತ್ತಾ ಬಂದಿದ್ದು, ಇದು ವಿಮಾನ ನಿಲ್ದಾಣದ ಸೇವಾ ಉತ್ಕೃಷ್ಟತೆಯ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಟರ್ಮಿನಲ್‌ 2 ಲಾಂಜ್‌ ತನ್ನ ವಿಶ್ವ ದರ್ಜೆಯ ವಿನ್ಯಾಸ, ಉನ್ನತ ಆತಿಥ್ಯ ಮತ್ತು ಆಧುನಿಕ ಐಷಾರಾಮಿ ಸೌಕರ್ಯದೊಂದಿಗೆ ಸ್ಥಳೀಯ ಸಂಸ್ಕೃತಿಯ ಅನನ್ಯ ಸಮ್ಮಿಲನದಿಂದ ಕೂಡಿದೆ. ಟರ್ಮಿನಲ್‌ 2 ನಲ್ಲಿನ 080 ಲಾಂಜ್‌ಗಳು ಬೆಂಗಳೂರಿನ ಹೆಮ್ಮೆಯ ಸಂಸ್ಕೃತಿ ಮತ್ತು ಹಸಿರು ಪರಿಸರದಿಂದ ಪ್ರೇರಿತವಾದ ನವೀನ ವಿನ್ಯಾಸಕ್ಕೆ ಹೆಸರುವಾಸಿಯಾಗಿದೆ. ವೈವಿಧ್ಯಮಯ ತಿಂಡಿ ತಿನಿಸುಗಳ ಆಯ್ಕೆ, ವರ್ಕ್‌ಸ್ಟೇಷನ್‌, ಹೈ-ಸ್ಪೀಡ್ ವೈ-ಫೈ ಮತ್ತು ಪ್ರೀಮಿಯಂ ಆತಿಥ್ಯ ಸೇವೆಗಳು ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಪ್ರಯಾಣಿಕರಿಗೆ ವಿಶ್ರಾಂತಿಯ ಅನುಭವವನ್ನು ನೀಡುತ್ತಿದೆ.

Ramesh Babu

Journalist

Recent Posts

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 minutes ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

57 minutes ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 hour ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

5 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

7 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

8 hours ago