‘ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್’ ಮತ್ತು ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್

ಬೆಂಗಳೂರು, ಡಿಸೆಂಬರ್ 18, 2024: ಟ್ರಾವೆಲ್ ಹಾಗೂ ಲೀಶರ್ ಇಂಡಿಯಾ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಅತ್ಯುತ್ತಮ ದೇಶೀಯ ಏರ್‌ಪೋರ್ಟ್ ಲಾಂಜ್’ ಮನ್ನಣೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ ಪಡೆದುಕೊಂಡಿದೆ.

ಇದಲ್ಲದೆ, ಕಾಂಡೆ ನಾಸ್ಟ್ ರೀಡರ್ಸ್ ಚಾಯ್ಸ್ ಅವಾರ್ಡ್ಸ್‌ -2024 ನಲ್ಲಿ ಟರ್ಮಿನಲ್ 2 ನಲ್ಲಿನ ಅಂತಾರಾಷ್ಟ್ರೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ಗೆ ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಎಂಬ ಶೀರ್ಷಿಕೆಯ ಮನ್ನಣೆಯನ್ನು ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ವಿಶ್ವದರ್ಜೆಯ ಪ್ರಯಾಣದ ಅನುಭವ, ಸೌಕರ್ಯ, ಸೌಲಭ್ಯ ಮತ್ತು ಅಸಾಧಾರಣ ಸೇವೆ ನೀಡುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬದ್ದತೆಯನ್ನು ಎತ್ತಿಹಿಡಿಯುತ್ತದೆ.

ಪ್ರತಿಷ್ಠಿತ ಟ್ರಾವೆಲ್ + ಲೀಶರ್ ಮತ್ತು ಕಾಂಡೆ ನಾಸ್ಟ್ ಟ್ರಾವೆಲರ್ ನಿಯತಕಾಲಿಕೆಗಳು ಪ್ರಯಾಣ ಮತ್ತು ಆತಿಥ್ಯ ಉದ್ಯಮದಲ್ಲಿನ ಅತ್ಯುತ್ತಮ ಸಂಸ್ಥೆಗಳನ್ನು ಓದುಗರ ಆಯ್ಕೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡುತ್ತವೆ. ಈ ಪುರಸ್ಕಾರಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್ ಬಗ್ಗೆ ಪ್ರಯಾಣಿಕರು ಹೊಂದಿರುವ ನಂಬಿಕೆ ಮತ್ತು ಮೆಚ್ಚುಗೆಯ ಪ್ರತಿರೂಪವಾಗಿದೆ.

ಈ ಕುರಿತು ಮಾತನಾಡಿದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರಿ ಮರಾರ್, “ಕಾಂಡೆ ನಾಸ್ಟ್ ಟ್ರಾವೆಲರ್ ಮತ್ತು ಟ್ರಾವೆಲ್ + ಲೀಶರ್ ವತಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2 ರ ಲಾಂಜ್‌ಗೆ ಸಿಕ್ಕಿರುವ ಈ ಮನ್ನಣೆ ಪ್ರಶಂಸನೀಯ, ಪ್ರಯಾಣಿಕರಿಗೆ ಮೊದಲ ಆದ್ಯತೆಯಲ್ಲಿ ಉತ್ತಮ ಸೌಕರ್ಯ ಹಾಗೂ ವ್ಯವಸ್ಥೆಯೊಂದಿಗೆ ನಿರ್ಮಾಣವಾಗಿರುವ ಲಾಂಜ್‌ನ್ನು ಇನ್ನಷ್ಟು ಪ್ರಯಾಣಿಕರ ಸ್ನೇಹಿಯಂತೆ ಕಾರ್ಯನಿರ್ವಹಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅನುಭವವನ್ನು ಇನ್ನಷ್ಟು ಉನ್ನತೀಕರಿಸಲು ಹಾಗೂ ಆತಿಥ್ಯದ ಹೊಸ ಮಾನದಂಡವನ್ನು ಹೆಚ್ಚಿಸಲು ನಮಗೆ ಪ್ರೇರಣೆ ನೀಡಿದಂತಾಗಿದೆ” ಎಂದರು.

ಟರ್ಮಿನಲ್‌ 2 ಆರಂಭಗೊಂಡ ಬಳಿಕ ನೀಡುತ್ತಿರುವ ಸೇವೆಗೆ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಪ್ರಶಸ್ತಿಗಳ ಮನ್ನಣೆ ದೊರೆಯುತ್ತಾ ಬಂದಿದ್ದು, ಇದು ವಿಮಾನ ನಿಲ್ದಾಣದ ಸೇವಾ ಉತ್ಕೃಷ್ಟತೆಯ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಟರ್ಮಿನಲ್‌ 2 ಲಾಂಜ್‌ ತನ್ನ ವಿಶ್ವ ದರ್ಜೆಯ ವಿನ್ಯಾಸ, ಉನ್ನತ ಆತಿಥ್ಯ ಮತ್ತು ಆಧುನಿಕ ಐಷಾರಾಮಿ ಸೌಕರ್ಯದೊಂದಿಗೆ ಸ್ಥಳೀಯ ಸಂಸ್ಕೃತಿಯ ಅನನ್ಯ ಸಮ್ಮಿಲನದಿಂದ ಕೂಡಿದೆ. ಟರ್ಮಿನಲ್‌ 2 ನಲ್ಲಿನ 080 ಲಾಂಜ್‌ಗಳು ಬೆಂಗಳೂರಿನ ಹೆಮ್ಮೆಯ ಸಂಸ್ಕೃತಿ ಮತ್ತು ಹಸಿರು ಪರಿಸರದಿಂದ ಪ್ರೇರಿತವಾದ ನವೀನ ವಿನ್ಯಾಸಕ್ಕೆ ಹೆಸರುವಾಸಿಯಾಗಿದೆ. ವೈವಿಧ್ಯಮಯ ತಿಂಡಿ ತಿನಿಸುಗಳ ಆಯ್ಕೆ, ವರ್ಕ್‌ಸ್ಟೇಷನ್‌, ಹೈ-ಸ್ಪೀಡ್ ವೈ-ಫೈ ಮತ್ತು ಪ್ರೀಮಿಯಂ ಆತಿಥ್ಯ ಸೇವೆಗಳು ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಪ್ರಯಾಣಿಕರಿಗೆ ವಿಶ್ರಾಂತಿಯ ಅನುಭವವನ್ನು ನೀಡುತ್ತಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

5 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

7 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

8 hours ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

12 hours ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

17 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

1 day ago