ಮದುವೆಯಾಗಿ ಕೈ ಕೊಟ್ಟ ಹೆಂಡತಿ ಹಾಗೂ ಆಕೆಯ ಪ್ರಿಯತಮನನ್ನು ಮಾಜಿ ಪತಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಯಾಸೀನ್ ಬಾಗೊಡೆ (21) ಮತ್ತು ಹೀನಾ (19) ಕೊಲೆಗೀಡಾದವರು. ತೌಫಿಕ್ ಕ್ಯಾಡಿ ಕೊಲೆ ಮಾಡಿದ ಆರೋಪಿ.
ಕೊಲೆ ಮಾಡುವ ವೇಳೆ ಅಡ್ಡಬಂದ ಅಮಿನಾಬಾಯಿ ಬಾಗೊಡೆ ಹಾಗೂ ಮುಸ್ತಫಾ ಮುಲ್ಲಾ ಮೇಲೂ ಆರೋಪಿ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಈ ಪರಿಣಾಮ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಕೊಲೆಯಾದ ಹೀನಾಳನ್ನ ಆರೋಪಿ ತೌಫಿಕ್ ಜೊತೆ 4 ತಿಂಗಳ ಹಿಂದೆ ಮದುವೆ ಮಾಡಲಾಗಿತ್ತು. ಆದರೆ ಮದುವೆಯಾಗಿ ಕೆಲ ತಿಂಗಳಿಗೆ ತಾನು ಈ ಹಿಂದೆ ಪ್ರೀತಿ ಮಾಡುತ್ತಿದ್ದ ಯಾಸೀನ್ ಎಂಬಾತನ ಜೊತೆ ಹೀನಾ ಓಡಿ ಹೋಗಿದ್ದಳು.
ಒಂದೂವರೆ ತಿಂಗಳ ಬಳಿಕ ಕೆಲ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿದ್ದ ಗ್ರಾಮಸ್ಥರು, ಪತಿ ತೌಫಿಕ್ ಜೊತೆ ವಿವಾಹ ಮುರಿದು ಯಾಸೀನ್ ಜೊತೆ ಮದುವೆ ಮಾಡಿಸಿದ್ದರು.
ಇದರಿಂದ ತೌಫಿಕ್ ಕೋಪಿತಗೊಂಡು ಯಾಸೀನ್ ಮನೆಗೆ ತೆರಳಿ ಇಬ್ಬರನ್ನೂ ಕೊಚ್ಚಿ ಕೊಲೆ ಮಾಡಿ, ಪೊಲೀಸ್ ಠಾಣೆಗೆ ಹೋಗಿವುದಾಗಿ ಹೇಳಿ ಪರಾರಿಯಾಗಿದ್ದಾನೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…